ಬೆಂಗಳೂರು,: ಅಪ್ರಾಪ್ತರನ್ನು ಬಳಸಿಕೊಂಡು ಬೈಕ್ಗಳನ್ನು ಕಳ್ಳತನ ಮಾಡಿಸ್ತಿದ್ದ ಕಾನ್ಸ್ಟೇಬಲ್ನನ್ನು ಪೊಲೀಸರು ಬಂಧಿಸಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಬಂಧಿತನ್ನು ಹೊನ್ನಪ್ಪ ಅಲಿಯಾಸ್ ರವಿ ಎಂದು ಗುರುತಿಸಲಾಗಿದೆ.
ಸಿವಿಲ್ ಕಾನ್ಸ್ಟೇಬಲ್ ಆಗಿರುವ ಹೊನ್ನಪ್ಪ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸದ್ಯ ಒಒಡಿ ಮೇಲೆ ಐಪಿಎಸ್ ಅಧಿಕಾರಿಯೊಬ್ಬರ ಪರ್ಸನಲ್ ಕಾರು ಡ್ರೈವರ್ ಆಗಿದ್ದ ಎನ್ನಲಾಗಿದೆ.
ಇನ್ನು ಹೊನ್ನಪ್ಪ ಜತೆಗೆ ರಾಜಸ್ಥಾನದ ರಮೇಶ್ ಹಾಗೂ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರ ಬಂಧಿಸಲಾಗಿದೆ.
ಓಎಲ್ ಎಕ್ಸ್ನಲ್ಲಿ ಯಾವ ಗಾಡಿಗೆ ಬೇಡಿಕೆ ಇದೆ ಅಂತಹ ಗಾಡಿಯನ್ನೇ ಹುಡುಕಿ ಕಳ್ಳತನ ಮಾಡಿಸುತ್ತಿದ್ದು, ಅಪ್ರಾಪ್ತರು ಬೈಕ್ ಕಳ್ಳತನ ಮಾಡಿ ಹೊನ್ನಪ್ಪನಿಗೆ ತಂದು ಕೊಡುತ್ತಿದ್ದು, ಬಳಿಕ ಬೈಕ್ ಮಾರಾಟ ಮಾಡಿ ಐದರಿಂದ ಆರು ಸಾವಿರ ರೂ. ಹಣವನ್ನು ಹುಡುಗರಿಗೆ ನೀಡ್ತಿದ್ದ ಎಂದು ತಿಳಿದು ಬಂದಿದೆ.
ಇನ್ನು ಬೆಂಗಳೂರು, ಬೆಂಗಳೂರು ಹೊರವಲಯ, ಹಾವೇರಿಯ ರಾಣಿಬೆನ್ನೂರು ಸೇರಿದಂತೆ ಅನೇಕ ಕಡೆ ಬೈಕ್ಗಳ ಕಳ್ಳತನ ಮಾಡಿಸುತ್ತಿದ್ದ ಆತ ತಪಾಸಣೆ ವೇಳೆ ಪೊಲೀಸರು ಗಾಡಿ ಹಿಡಿದಾಗ ಅವರಿಗೆ ಕರೆ ಮಾಡಿ ನಾನು ಪೊಲೀಸ್ ನಮ್ಮ ಕಡೆಯವರು ಬಿಡಿ ಅಂತ ಬಿಡಿಸುತ್ತಿದ್ದ. ಇದೀಗ ಪೊಲೀಸರ ಕೈಗೆ ಹೊನ್ನಪ್ಪ ಸಿಕ್ಕಿಬಿದ್ದಿದ್ದು, ಆತನನ್ನು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…