ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿ 10 ದಿನ ಕಳೆದರೂ ಸಚಿವ ಕೃಷ್ಣ ಬೈರೇಗೌಡ ಇನ್ನೂ ಬೆಂಗಳೂರು ಅಭಿವೃದ್ಧಿ ಖಾತೆ ಅಧಿಕಾರ ವಹಿಸಿಕೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು ಎಂದಿದ್ದಾರೆ.
ಖಾತೆ ಅಧಿಕಾರ ವಹಿಸಿಕೊಳ್ಳದ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಖಾತೆ ವಿಚಾರಕ್ಕೆ ಕೆಲವು ಸ್ಪಷ್ಟತೆ ಬೇಕಿದೆ. ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು. ಜವಾಬ್ದಾರಿಗೆ ಸರಿಯಾಗಿ ನಿರ್ವಹಣೆ ಮಾಡಿ ರಿಸಲ್ಟ್ ಕೊಡಬೇಕು. ಸಿಎಂ ಅವರಿಗೆ ಯಾವ ಸ್ಪಷ್ಟತೆ ಇರಬೇಕು ಎಂದು ಮನವರಿಕೆ ಮಾಡಿದ್ದೇನೆ. ಆದಷ್ಟು ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:
ಕರ್ನಾಟಕದ ಕಠಿಣ ಜವಾಬ್ದಾರಿಗಳಲ್ಲಿ ಬೆಂಗಳೂರು ಖಾತೆ ಕೂಡ ಒಂದು. ಸಿಎಂ ಖಾತೆ ಬಗ್ಗೆ ಸ್ಪಷ್ಟತೆ ನೀಡಿದ ನಂತರ ನಾನು ಮುಂದುವರೆಯುತ್ತೇನೆ. ಅಧಿಕಾರ ಒಂದೇ ನೋಡೋದಲ್ಲ, ಮುಂದೆ ನಾನು ಉತ್ತರ ಕೊಡಬೇಕಾಗುತ್ತದೆ. ಸ್ಪಷ್ಟತೆ ಇಲ್ಲದೇ ಕೆಲಸ ಮಾಡಲು ಹೋದರೆ ತೊಂದರೆಯಾಗುತ್ತದೆ. ಸಿಎಂ ಒಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಹೈಕಮಾಂಡ್ ನಾಯಕರ ಗಮನದಲ್ಲಿ ಈ ವಿಷಯ ಇದೆ. ಹೈಕಮಾಂಡ್ ಸಹ ಸಿಎಂ ಜೊತೆ ಸಮಾಲೋಚನೆ ಮಾಡಿದ್ದಾರೆ ಎಂದು ಹೇಳಿದರು.
ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…
ಪೆಟ್ರೋಲ್, ಗ್ಯಾಸ್ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…
ಧರ್ಮಸ್ಥಳ ಬುರುಡೆ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ ಬೆಳಗಾವಿ: ಧರ್ಮಸ್ಥಳ…
ಬಂಟ್ವಾಳ: ಯುವತಿ ನಾಪತ್ತೆ ಬಂಟ್ವಾಳ: ತಂದೆ, ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಮನೆಯಿಂದ ಮಗಳು ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ…
ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರಿಗೆ ಉತ್ತಮ ಅವಕಾಶ ಖಚಿತ : ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ…
ಜುಲೈ 11ರಂದು ಕಾಪು ತಾಲೂಕು ಕೃಷಿಕ ಸಮಾಜದ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಅವಕಾಶ ಉಡುಪಿ : ಕರ್ನಾಟಕ ಪ್ರದೇಶ ಕೃಷಿಕ…