Featured

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ

ಬೆಂಗಳೂರು: ಪ್ರಮಾಣವಚನ ಸ್ವೀಕಾರ ಮಾಡಿ 10 ದಿನ ಕಳೆದರೂ ಸಚಿವ ಕೃಷ್ಣ ಬೈರೇಗೌಡ ಇನ್ನೂ ಬೆಂಗಳೂರು ಅಭಿವೃದ್ಧಿ ಖಾತೆ ಅಧಿಕಾರ ವಹಿಸಿಕೊಂಡಿಲ್ಲ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು ಎಂದಿದ್ದಾರೆ.

ಖಾತೆ ಅಧಿಕಾರ ವಹಿಸಿಕೊಳ್ಳದ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಖಾತೆ ವಿಚಾರಕ್ಕೆ ಕೆಲವು ಸ್ಪಷ್ಟತೆ ಬೇಕಿದೆ. ಖಾತೆ ಜವಾಬ್ದಾರಿ ತೆಗೆದುಕೊಳ್ಳುವಾಗ ಕೆಲ ಸ್ಪಷ್ಟತೆ ಇರಬೇಕು. ಜವಾಬ್ದಾರಿಗೆ ಸರಿಯಾಗಿ ನಿರ್ವಹಣೆ ಮಾಡಿ ರಿಸಲ್ಟ್ ಕೊಡಬೇಕು. ಸಿಎಂ ಅವರಿಗೆ ಯಾವ ಸ್ಪಷ್ಟತೆ ಇರಬೇಕು ಎಂದು ಮನವರಿಕೆ ಮಾಡಿದ್ದೇನೆ. ಆದಷ್ಟು ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: 

ಕರ್ನಾಟಕದ ಕಠಿಣ ಜವಾಬ್ದಾರಿಗಳಲ್ಲಿ ಬೆಂಗಳೂರು ಖಾತೆ ಕೂಡ ಒಂದು. ಸಿಎಂ ಖಾತೆ ಬಗ್ಗೆ ಸ್ಪಷ್ಟತೆ ನೀಡಿದ ನಂತರ ನಾನು ಮುಂದುವರೆಯುತ್ತೇನೆ. ಅಧಿಕಾರ ಒಂದೇ ನೋಡೋದಲ್ಲ, ಮುಂದೆ ನಾನು ಉತ್ತರ ಕೊಡಬೇಕಾಗುತ್ತದೆ. ಸ್ಪಷ್ಟತೆ ಇಲ್ಲದೇ ಕೆಲಸ ಮಾಡಲು ಹೋದರೆ ತೊಂದರೆಯಾಗುತ್ತದೆ. ಸಿಎಂ ಒಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಹೈಕಮಾಂಡ್ ನಾಯಕರ ಗಮನದಲ್ಲಿ ಈ ವಿಷಯ ಇದೆ. ಹೈಕಮಾಂಡ್ ಸಹ ಸಿಎಂ ಜೊತೆ ಸಮಾಲೋಚನೆ ಮಾಡಿದ್ದಾರೆ ಎಂದು ಹೇಳಿದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

9 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

9 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

11 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

11 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

11 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

12 hours ago