ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ವಿಜಯ್ ತಾತ ಮತ್ತು ಸಹಚರರಿಗೆ ಸಂಬಂಧಿಸಿದ ಒಟ್ಟು ಎಂಟು ಸ್ಥಳಗಳಲ್ಲಿ ನಡೆದಿದ್ದ ದಾಳಿ ಪ್ರಕರಣ ಸಂಬಂಧ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಜಾರಿ ನಿರ್ದೇಶನಾಲಯ ಆರೋಪಿಗಳ ಅಕೌಂಟ್ನಲ್ಲಿದ್ದ ಸುಮಾರು 11.25 ಕೋಟಿ ಹಣವನ್ನ ಫ್ರೀಜ್ ಮಾಡಲಾಗಿದ್ದು, 120 ಕೋಟಿ ಮೌಲ್ಯದ ಆಸ್ತಿ ಪತ್ರಗಳು, ಡಿಜಿಟಲ್ ಎವಿಡೆನ್ಸ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಜಾರಿ ನಿರ್ದೇಶನಾಲಯ, ಫೆಬ್ರವರಿ 29 ಮತ್ತು ಮಾರ್ಚ್ 1 ರಂದು ಬೆಂಗಳೂರಿನ 8 ಸ್ಥಳಗಳಲ್ಲಿ ಪಿಎಂಎಲ್ಎ 2002 ರ ಅಡಿಯಲ್ಲಿ ಆರೋಪಿಗಳಾದ ವಿಜಯಾ ಆರ್ ತಾತಾ ಮತ್ತು ಅವರ ಸಹಚರರ ವಸತಿ ಆವರಣದಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು ಎಂದು ತಿಳಿಸಿದೆ.
ಆರ್ ಎಸ್ ಚಂದ್ರಶೇಖರ್, ಮುನಿರಾಜು ಕೆ, ಡಿ ನಾಗೇಂದ್ರ ಬಾಬು, ಮಂಜುನಾಥ್ ಬಿ ಎಸ್ ಮತ್ತು ಸಂಬಂಧಿತ ಕಂಪನಿಗಳ ಕಚೇರಿಗಳ ಮೇಲೆ. ಸಂಚಯ ಲ್ಯಾಂಡ್ ಆ್ಯಂಡ್ ಎಸ್ಟೇಟ್ ಪ್ರೈ. ಲಿಮಿಟೆಡ್, ಬಿಸಿಸಿ ಕನ್ಸ್ಟ್ರಕ್ಷನ್ಸ್ ಪ್ರೈ. ಲಿಮಿಟೆಡ್, ಆಕಾಶ್ ಎಜುಕೇಶನ್ ಅಂಡ್ ಡೆವಲಪ್ಮೆಂಟ್ ಟ್ರಸ್ಟ್, ಎಸ್ ವಿ ಕಾಂಕ್ರೀಟ್ ಪ್ರಾಜೆಕ್ಟ್ಸ್ ಪ್ರೈವೇಟ್, M/s ಸಂಚಯ ಲ್ಯಾಂಡ್ & ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರಿಗೆ ಸಂಬಂಧಿಸಿದ ಪ್ರಕರಣಗಳು ಇದಾಗಿದೆ.
ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಬ್ಯಾಂಕ್ ಖಾತೆಯಲ್ಲಿ 11.25 ಕೋಟಿ ರೂಪಾಯಿ ಪತ್ತೆಯಾಗಿದ್ದು, ಇದನ್ನು ಫ್ರೀಜ್ ಮಾಡಲಾಗಿದೆ. ಇದರೊಂದಿಗೆ 120 ಕೋಟಿ (ಅಂದಾಜು) ಮೌಲ್ಯದ ಸ್ಥಿರ/ಚರ ಆಸ್ತಿಗಳಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…