Featured

ಬೆಂಗಳೂರು: ಇಡಿ ದಾಳಿಯಲ್ಲಿ ಬರೋಬ್ಬರಿ 11 ಕೋಟಿ ರೂ. ನಗದು, 120 ಕೋಟಿ ಮೌಲ್ಯದ ಚರ-ಸ್ಥಿರಾಸ್ತಿ ವಶ – Vishwanews24

ಬೆಂಗಳೂರು: ಇಡಿ ದಾಳಿಯಲ್ಲಿ ಬರೋಬ್ಬರಿ 11 ಕೋಟಿ ರೂ. ನಗದು, 120 ಕೋಟಿ ಮೌಲ್ಯದ ಚರ-ಸ್ಥಿರಾಸ್ತಿ ವಶ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ವಿಜಯ್ ತಾತ ಮತ್ತು ಸಹಚರರಿಗೆ ಸಂಬಂಧಿಸಿದ ಒಟ್ಟು ಎಂಟು ಸ್ಥಳಗಳಲ್ಲಿ ನಡೆದಿದ್ದ ದಾಳಿ  ಪ್ರಕರಣ ಸಂಬಂಧ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಜಾರಿ ನಿರ್ದೇಶನಾಲಯ  ಆರೋಪಿಗಳ ಅಕೌಂಟ್‌ನಲ್ಲಿದ್ದ ಸುಮಾರು 11.25 ಕೋಟಿ ಹಣವನ್ನ ಫ್ರೀಜ್ ಮಾಡಲಾಗಿದ್ದು, 120 ಕೋಟಿ ಮೌಲ್ಯದ ಆಸ್ತಿ ಪತ್ರಗಳು, ಡಿಜಿಟಲ್ ಎವಿಡೆನ್ಸ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಜಾರಿ ನಿರ್ದೇಶನಾಲಯ, ಫೆಬ್ರವರಿ 29 ಮತ್ತು ಮಾರ್ಚ್ 1 ರಂದು ಬೆಂಗಳೂರಿನ 8 ಸ್ಥಳಗಳಲ್ಲಿ ಪಿಎಂಎಲ್‌ಎ 2002 ರ ಅಡಿಯಲ್ಲಿ ಆರೋಪಿಗಳಾದ ವಿಜಯಾ ಆರ್ ತಾತಾ ಮತ್ತು ಅವರ ಸಹಚರರ ವಸತಿ ಆವರಣದಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು ಎಂದು ತಿಳಿಸಿದೆ.

ಆರ್ ಎಸ್ ಚಂದ್ರಶೇಖರ್, ಮುನಿರಾಜು ಕೆ, ಡಿ ನಾಗೇಂದ್ರ ಬಾಬು, ಮಂಜುನಾಥ್ ಬಿ ಎಸ್ ಮತ್ತು ಸಂಬಂಧಿತ ಕಂಪನಿಗಳ ಕಚೇರಿಗಳ ಮೇಲೆ. ಸಂಚಯ ಲ್ಯಾಂಡ್ ಆ್ಯಂಡ್ ಎಸ್ಟೇಟ್ ಪ್ರೈ. ಲಿಮಿಟೆಡ್, ಬಿಸಿಸಿ ಕನ್ಸ್ಟ್ರಕ್ಷನ್ಸ್ ಪ್ರೈ. ಲಿಮಿಟೆಡ್, ಆಕಾಶ್ ಎಜುಕೇಶನ್ ಅಂಡ್ ಡೆವಲಪ್‌ಮೆಂಟ್ ಟ್ರಸ್ಟ್, ಎಸ್ ವಿ ಕಾಂಕ್ರೀಟ್ ಪ್ರಾಜೆಕ್ಟ್ಸ್ ಪ್ರೈವೇಟ್, M/s ಸಂಚಯ ಲ್ಯಾಂಡ್ & ಎಸ್ಟೇಟ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರಿಗೆ ಸಂಬಂಧಿಸಿದ ಪ್ರಕರಣಗಳು ಇದಾಗಿದೆ.

ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಬ್ಯಾಂಕ್ ಖಾತೆಯಲ್ಲಿ 11.25 ಕೋಟಿ ರೂಪಾಯಿ ಪತ್ತೆಯಾಗಿದ್ದು, ಇದನ್ನು ಫ್ರೀಜ್ ಮಾಡಲಾಗಿದೆ. ಇದರೊಂದಿಗೆ 120 ಕೋಟಿ (ಅಂದಾಜು) ಮೌಲ್ಯದ ಸ್ಥಿರ/ಚರ ಆಸ್ತಿಗಳಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ಮತ್ತು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

Vishwa News 24

Recent Posts

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

22 minutes ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

27 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

3 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

4 hours ago