ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಶೋಭಾ ಕರಂದ್ಲಾಜೆ ಅವರು, ಮೈಸೂರು ಬ್ಯಾಂಕ್ ವೃತ್ತರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಜೊತೆಗೆ ರೋಡ್ ಶೋ ಕೂಡಾ ನಡೆಸಿದರು. ಈ ವೇಳೆ ಕೆ.ಗೋಪಾಲಯ್ಯ , ದಾಸರಹಳ್ಳಿ ಶಾಸಕರಾದ ಎಸ್. ಮುನಿರಾಜು , ಕೆ.ಆರ್.ಪುರಂ ಶಾಸಕರಾದ ಭೈರತಿ ಬಸವರಾಜು, ವಿಧಾನಪರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ, ಭಾರತೀ ಶೆಟ್ಟಿ, ಚಲವಾದಿ ನಾರಾಯಣ ಸ್ವಾಮಿಯವರು, ಕಟ್ಟಾ ಜಗದೀಶ್ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಕ್ಷೇತ್ರದ ಅಭಿವೃದ್ದಿಗೆ ನಿಮ್ಮ ಜೊತೆ ಇರುತ್ತೇನೆ. ಬರುವ ಐದು ವರ್ಷಗಳಲ್ಲಿ ಬೆಂಗಳೂರು ಉತ್ತರವನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ ಎಂದರು. ಮೊದಲ ಬಾರಿ ನರೇಂದ್ರ ಮೋದಿ ನೇತೃತ್ವ ಒಪ್ಪಿ ಮಾಜಿ ಪ್ರಧಾನಿ ಎಚ್ಡಿ ದೇವೆಗೌಡರು ನಮ್ಮ ಜೊತೆಗೆ ಸೇರಿದ್ದಾರೆ. ನಮ್ಮಿಬ್ಬರ ಒಗ್ಗಟ್ಟು ಕಾಂಗ್ರೆಸ್ಗೆ ಪಾಠ ಕಳಿಸಲು ಶಕ್ತಿ ಬಂದಿದೆ ಎಂದರು.
ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲಬೇಕು. ಕಾರ್ಯಕರ್ತರಲ್ಲಿ ಉತ್ಸಾಹದಲ್ಲಿದೆ. ಕರ್ನಾಟಕದಲ್ಲಿ 28 ಕ್ಕೆ 28 ಕ್ಷೇತ್ರಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಗೆಲ್ಲಲಿದೆ. ಬಿಜೆಪಿ ಹಾಗೂ ಜೆಡಿಎಸ್ ಹಾಲು ಸಕ್ಕರೆಯಂತೆ ಬೆರೆತು ಕೆಲಸ ಮಾಡಿದರೆ 28 ಕ್ಷೇತ್ರದಲ್ಲಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…