ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು.
ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ವಾರಾಣಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬನಾರಸ್-ಖಜುರಾಹೊ, ಲಕ್ನೋ-ಸಹಾರನ್ಪುರ, ಫಿರೋಜ್ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಸಂಚರಿಸುವ ರೈಲುಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.
ದೇಶದಾದ್ಯಂತ ವಂದೇ ಭಾರತ್ ರೈಲಿಗೆ ಬೇಡಿಕೆ ಹೆಚ್ಚಿದೆ. ಇವುಗಳು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಅಭಿವೃದ್ಧಿಪಡಿಸಿದ ಹೈ ಸ್ಪೀಡ್ ರೈಲುಗಳಾಗಿದ್ದು, ಶನಿವಾರ (ನ.8) ಬೆಳಗ್ಗೆ 8:15ರ ಸುಮಾರಿಗೆ ವಾರಣಾಸಿಯಲ್ಲಿ ನಾಲ್ಕು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಈ ಮೂಲಕ ಒಟ್ಟು ವಂದೇ ಭಾರತ್ ರೈಲು ಸೇವೆಗಳ ಸಂಖ್ಯೆ 164ಕ್ಕೆ ಏರಿದೆ. ಈ ರೈಲುಗಳು ಪ್ರಮುಖ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವುದಲ್ಲದೆ, ಪ್ರಾದೇಶಿಕ ಸಂಚಾರವನ್ನು ಸುಧಾರಿಸಿ, ಪ್ರವಾಸೋದ್ಯಮವನ್ನು ಉತ್ತೇಜಿಸಿ, ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳಿಗೆ ಬೆಂಬಲ ನೀಡಲಿವೆ.
ವಂದೇ ಭಾರತ್ ರೈಲು ಕೆಎಸ್ಆರ್ ಬೆಂಗಳೂರಿನಿಂದ ಬೆಳಗ್ಗೆ 5:10ಕ್ಕೆ ಹೊರಟು ಮಧ್ಯಾಹ್ನ 1:50ಕ್ಕೆ ಎರ್ನಾಕುಲಂ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 2:20ಕ್ಕೆ ಹೊರಟು ರಾತ್ರಿ 11ಕ್ಕೆ ಬೆಂಗಳೂರು ತಲುಪಲಿದೆ. ಕೇರಳದ ತ್ರಿಶ್ಯೂರ್, ಪಾಲಕ್ಕಾಡ್, ತಮಿಳುನಾಡಿನ ಕೊಯಮತ್ತೂರು, ಈರೋಡ್, ತಿರುಪ್ಪೂರು ಮತ್ತು ಸೇಲಂ ಹಾಗೂ ಕರ್ನಾಟಕದಲ್ಲಿ ಕೃಷ್ಣರಾಜಪುರದಲ್ಲಿ ನಿಲುಗಡೆಯಾಗಲಿದೆ. 8 ಗಂಟೆ 40 ನಿಮಿಷಗಳಲ್ಲಿ ತಲುಪುವ ವಂದೇ ಭಾರತ್ ಈ ಮಾರ್ಗದಲ್ಲಿ ಸಂಚರಿಸುವ ಅತ್ಯಂತ ವೇಗದ ರೈಲು ಇದಾಗಿದೆ. ಬುಧವಾರದಂದು ಯಾವುದೇ ಸೇವೆ ಇರುವುದಿಲ್ಲ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…