Featured

ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಲಕ್ನೋ: ಪ್ರಧಾನಿ ನರೇಂದ್ರ ಮೋದಿ  ಅವರಿಂದು ಬೆಂಗಳೂರು-ಎರ್ನಾಕುಲಂ ಸೇರಿ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌  ರೈಲುಗಳಿಗೆ ಚಾಲನೆ ನೀಡಿದರು.

ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ  ವಾರಾಣಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬನಾರಸ್-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಸಂಚರಿಸುವ ರೈಲುಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ದೇಶದಾದ್ಯಂತ ವಂದೇ ಭಾರತ್ ರೈಲಿಗೆ ಬೇಡಿಕೆ ಹೆಚ್ಚಿದೆ. ಇವುಗಳು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಅಭಿವೃದ್ಧಿಪಡಿಸಿದ ಹೈ ಸ್ಪೀಡ್ ರೈಲುಗಳಾಗಿದ್ದು, ಶನಿವಾರ (ನ.8) ಬೆಳಗ್ಗೆ 8:15ರ ಸುಮಾರಿಗೆ ವಾರಣಾಸಿಯಲ್ಲಿ ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಈ ಮೂಲಕ ಒಟ್ಟು ವಂದೇ ಭಾರತ್ ರೈಲು ಸೇವೆಗಳ ಸಂಖ್ಯೆ 164ಕ್ಕೆ ಏರಿದೆ. ಈ ರೈಲುಗಳು ಪ್ರಮುಖ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವುದಲ್ಲದೆ, ಪ್ರಾದೇಶಿಕ ಸಂಚಾರವನ್ನು ಸುಧಾರಿಸಿ, ಪ್ರವಾಸೋದ್ಯಮವನ್ನು ಉತ್ತೇಜಿಸಿ, ದೇಶದಾದ್ಯಂತ ಆರ್ಥಿಕ ಚಟುವಟಿಕೆಗಳಿಗೆ ಬೆಂಬಲ ನೀಡಲಿವೆ.

ವಂದೇ ಭಾರತ್ ರೈಲು ಕೆಎಸ್‌ಆರ್ ಬೆಂಗಳೂರಿನಿಂದ ಬೆಳಗ್ಗೆ 5:10ಕ್ಕೆ ಹೊರಟು ಮಧ್ಯಾಹ್ನ 1:50ಕ್ಕೆ ಎರ್ನಾಕುಲಂ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 2:20ಕ್ಕೆ ಹೊರಟು ರಾತ್ರಿ 11ಕ್ಕೆ ಬೆಂಗಳೂರು ತಲುಪಲಿದೆ. ಕೇರಳದ ತ್ರಿಶ್ಯೂರ್, ಪಾಲಕ್ಕಾಡ್, ತಮಿಳುನಾಡಿನ ಕೊಯಮತ್ತೂರು, ಈರೋಡ್, ತಿರುಪ್ಪೂರು ಮತ್ತು ಸೇಲಂ ಹಾಗೂ ಕರ್ನಾಟಕದಲ್ಲಿ ಕೃಷ್ಣರಾಜಪುರದಲ್ಲಿ ನಿಲುಗಡೆಯಾಗಲಿದೆ. 8 ಗಂಟೆ 40 ನಿಮಿಷಗಳಲ್ಲಿ ತಲುಪುವ ವಂದೇ ಭಾರತ್ ಈ ಮಾರ್ಗದಲ್ಲಿ ಸಂಚರಿಸುವ ಅತ್ಯಂತ ವೇಗದ ರೈಲು ಇದಾಗಿದೆ. ಬುಧವಾರದಂದು ಯಾವುದೇ ಸೇವೆ ಇರುವುದಿಲ್ಲ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

18 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

18 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

18 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

19 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

19 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

19 hours ago