ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಚಾಲಕ ಬಿಎಂಟಿಸಿ ಬಸ್ ಟಯರ್ಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದೀಪಕ್ (30) ಮೃತ ದುರ್ದೈವಿ. ನಿನ್ನೆ ರಾತ್ರಿ 7:45ರ ಸುಮಾರಿಗೆ ಪೀಣ್ಯದ 14ನೇ ಕ್ರಾಸ್ನಲ್ಲಿ ಘಟನೆ ನಡೆದಿದೆ. ಪೀಣ್ಯ ಪೊಲೀಸ್ ಠಾಣೆ ಮಾರ್ಗವಾಗಿ ಕಾಮಾಕ್ಷಿಪಾಳ್ಯದ ಕಡೆ ತೆರಳುತಿದ್ದ ದೀಪಕ್, ಬೈಕ್ನಲ್ಲಿ ಬಸ್ನ್ನು ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಮಾರ್ಗದ ಎಡಭಾಗದಲ್ಲಿ ಮುಂದೆ ಬರಲು ಯತ್ನಿಸಿದ ಆತ ಬಸ್ನ ಹಿಂಬದಿ ಟಯರ್ಗೆ ಸಿಲುಕಿ ಮೃತಪಟ್ಟಿದ್ದಾನೆ.
ದೀಪಕ್ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೀಪಕ್ ಮೂಲತಃ ವಾರಣಾಸಿಯವಾನಾಗಿದ್ದು, ಕಳೆದ ಮೂರು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ. ಎಸ್ಎಸ್ ಫ್ಯಾಬ್ ಕಂಪನಿಯಲ್ಲಿ ಆಪರೇಟರ್ ಆಗಿ ಕೆಲಸ ಮಾಡುತಿದ್ದ. ಕೆಲಸ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೀಣ್ಯ ಸಂಚಾರಿ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡದು ವಿಚಾರಣೆ ನಡೆಸುತ್ತಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…