ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಚಾಲಕ ಬಿಎಂಟಿಸಿ ಬಸ್ ಟಯರ್ಗೆ ಸಿಲುಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ದೀಪಕ್ (30) ಮೃತ ದುರ್ದೈವಿ. ನಿನ್ನೆ ರಾತ್ರಿ 7:45ರ ಸುಮಾರಿಗೆ ಪೀಣ್ಯದ 14ನೇ ಕ್ರಾಸ್ನಲ್ಲಿ ಘಟನೆ ನಡೆದಿದೆ. ಪೀಣ್ಯ ಪೊಲೀಸ್ ಠಾಣೆ ಮಾರ್ಗವಾಗಿ ಕಾಮಾಕ್ಷಿಪಾಳ್ಯದ ಕಡೆ ತೆರಳುತಿದ್ದ ದೀಪಕ್, ಬೈಕ್ನಲ್ಲಿ ಬಸ್ನ್ನು ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಮಾರ್ಗದ ಎಡಭಾಗದಲ್ಲಿ ಮುಂದೆ ಬರಲು ಯತ್ನಿಸಿದ ಆತ ಬಸ್ನ ಹಿಂಬದಿ ಟಯರ್ಗೆ ಸಿಲುಕಿ ಮೃತಪಟ್ಟಿದ್ದಾನೆ.
ದೀಪಕ್ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೀಪಕ್ ಮೂಲತಃ ವಾರಣಾಸಿಯವಾನಾಗಿದ್ದು, ಕಳೆದ ಮೂರು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದ. ಎಸ್ಎಸ್ ಫ್ಯಾಬ್ ಕಂಪನಿಯಲ್ಲಿ ಆಪರೇಟರ್ ಆಗಿ ಕೆಲಸ ಮಾಡುತಿದ್ದ. ಕೆಲಸ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೀಣ್ಯ ಸಂಚಾರಿ ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡದು ವಿಚಾರಣೆ ನಡೆಸುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…