ಬೆಂಗಳೂರು : ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಆಗಮಿಸುವುದಿಲ್ಲ ಎಂದು ಪುತ್ತೂರು ಕಾಂಗ್ರೆಸ್ ಶಾಸಕ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ ಸ್ಪಷ್ಟನೆ ನೀಡಿದ್ದಾರೆ.
ಅಪ್ರಾಪ್ತ ವಯಸ್ಕರು ಸೇರಿದಂತೆ ಮಹಿಳಾ ಕುಸ್ತಿಪಟುಗಳ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರು ಆರಂಭದಲ್ಲಿ ನವೆಂಬರ್ 25 ಮತ್ತು 26 ರಂದು ನಿಗದಿಯಾಗಿದ್ದ ಬೆಂಗಳೂರು ಕಂಬಳ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ ಇದಕ್ಕೆ ಅನೇಕ ಮಂದಿ ವಿರೋಧ ವ್ಯಕ್ತಪಡಿಸಿದ್ದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ರೈ, ಇದು ದೊಡ್ಡ ಕಾರ್ಯಕ್ರಮ ಆಗಿರುವ ಕಾರಣ ಬೇರೆ ಬೇರೆ ಸಂಘಟನೆಯವರು ಬಂದು ಅನೇಕ ಮನವಿ ಮಾಡುತ್ತಾರೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಬಂದು ವೇದಿಕೆಗೆ ಅವರ ಹೆಸರನ್ನು ಇಡಲು ಹೇಳುತ್ತಾರೆ. ಸಿದ್ದಿ ಜನಾಂಗದವರು ಬಂದು ಅವರನ್ನು ಆಹ್ವಾನಿಸುವಂತೆ ಕೇಳಿದ್ದರು. ಆದರೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಮೊನ್ನೆಯೇ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ ಎಂದರು.
ಇನ್ನು ಕಂಬಳ ಎಲ್ಲರಿಗೂ ಸೇರುವ ಕಾರ್ಯಕ್ರಮವಾಗಿದ್ದು, ಪಕ್ಷಾತೀತವಾಗಿ ಯಾವುದೇ ಪಕ್ಷ ಭೇದವಿಲ್ಲದೇ ಕಾಂಗ್ರೆಸ್, ಬಿಜೆಪಿ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…