ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ. ಈ ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ಅವರು ಶನಿವಾರ (ನ.25) ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಕಂಬಳ ವೀಕ್ಷಣೆಗೆ ಬರುವ ಜನರು ಗೇಟ್ ನಂಬರ್ 1, 2, 3 ಹಾಗೂ 4ರ ಮೂಲಕ ಪ್ರವೇಶಿಸಲು ಅವಕಾಶ ನೀಡಲಾಗಿದೆ.
ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…