Featured

ಬೆಂಗಳೂರು ಕಂಬಳ :  ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್​ ರಾಜ್​​ಕುಮಾರ್ – vishwanews24

ಬೆಂಗಳೂರು ಕಂಬಳ :  ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್​ ರಾಜ್​​ಕುಮಾರ್

ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ಪಂದ್ಯ ಆಯೋಜಿಸಲಾಗಿದೆ. ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ ಶನಿವಾರ ಮತ್ತು ಭಾನುವಾರ (ನ.25, 26) ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ. ಈ ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್  ಅವರು ಶನಿವಾರ (ನ.25) ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಸಂಸದ ಸದಾನಂದ ಗೌಡ, ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ಪಂದ್ಯಾವಳಿಯನ್ನು ವೀಕ್ಷಿಸಲು ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಅಲ್ಲದೆ ಸಂಚಾರಿ ಪೊಲೀಸರು ಸಾರ್ವಜನಿಕರು ಕಟ್ಟುನಿಟ್ಟಾಗಿ ಟ್ರಾಫಿಕ್​ ನಿಯಮ ಪಾಲಿಸುವಂತೆ ನೋಡಿಕೊಳ್ಳುತ್ತಿದ್ದಾರೆ. ಇನ್ನು ಕಂಬಳ ವೀಕ್ಷಣೆಗೆ ಬರುವ ಜನರು ಗೇಟ್ ನಂಬರ್ 1, 2, 3 ಹಾಗೂ 4ರ ಮೂಲಕ ಪ್ರವೇಶಿಸಲು ಅವಕಾಶ ನೀಡಲಾಗಿದೆ.

ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕ ಎಂಟ್ರಿ ವ್ಯವಸ್ಥೆ ಮಾಡಲಾಗಿದೆ. ವಿವಿಐಪಿಗಳು ಫನ್ ವರ್ಲ್ಡ್‌ ಕಡೆಯಿಂದ ಪ್ರವೇಶಿಸಬೇಕು. ಯಾವುದೇ ಟಿಕೆಟ್‌ ಇಲ್ಲದೆ ಉಚಿತವಾಗಿ ಪ್ರವೇಶದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6:30 ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳ ಮೈದಾನಕ್ಕೆ ಆಗಮಿಸಲಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

56 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 hour ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago