ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆಯಲ್ಲಿ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಹಾಗೂ ಆತನ ಮಗನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮುನಿರಾಜು ರೆಡ್ಡಿ ಆತನ ಮಗ, ಕಾಂಟ್ರ್ಯಾಕ್ಟರ್ ಸೇರಿ ಇತರರು ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ. ಪ್ರಕರಣದಲ್ಲಿ ಒಟ್ಟು ಮೂರು ಜನರ ಹೆಸರನ್ನು ಪೊಲೀಸರು ಉಲ್ಲೇಖ ಮಾಡಿದ್ದು, ನಿರ್ಲಕ್ಷ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಗೆ ಕಳಪೆ ಕಾಮಗಾರಿಯೇ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ಕಟ್ಟಡ ನಿರ್ಮಾಣದಲ್ಲಿ ಪಿಲ್ಲರ್ ರಾಡ್ 28-30 ಎಂಎಂ ರಾಡ್ ಹಾಕಬೇಕಿತ್ತು ಆದರೆ 18-20 ಎಂಎಂ ರಾಡ್ ಬಳಸಿದ್ದಾರೆ. 14-16 ರಾಡ್ ಹಾಕಿ ಮೋಲ್ಡಿಂಗ್ ಮಾಡಬೇಕಿತ್ತು, ಆದರೆ 8-10 ಎಂಎಂ ರಾಡ್ ಬಳಸಿದ್ದಾರೆ. ಎಂ ಸ್ಯಾಂಡ್ ಹೆಚ್ಚು ಬಳಸಿ, ಸಿಮೆಂಟ್ ಕಡಿಮೆ ಬಳಸಿರುವ ಶಂಕೆ ವ್ಯಕ್ತವಾಗಿದೆ.
ಮಳೆಯಿಂದ ಈ ಘಟನೆ ಸಂಭವಿಸಿಲ್ಲ ಇದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಅವಶೇಷಗಳಡಿ ನಿಲುಕಿರುವ ಇನ್ನೂ ಎರಡರಿಂದ ಮೂರು ಜನರಿಗಾಗಿ ಹುಡುಕಾಟ ಮುಂದುವರೆದಿದೆ.
21 ಜನರಲ್ಲಿ 18 ಜನರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈವರೆಗೆ 13 ಜನರನ್ನು ರಕ್ಷಣೆ ಮಾಡಲಾಗಿದೆ. ಐದು ಜನರ ಸಾವಾಗಿದ್ದು, ಒಟ್ಟು 18 ಕಾರ್ಮಿಕರು ಸಿಕ್ಕಿರುವ ಬಗ್ಗೆ ಮಾಹಿತಿ ಇದೆ. ಇನ್ನೂ ಮೂರು ಜನರಿಗಾಗಿ ಶೋಧಕಾರ್ಯ ಮುಂದುರೆದಿದೆ. ಜೆಸಿಬಿ ಮೂಲಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…