ಬೆಂಗಳೂರು: ಕಬ್ಬನ್ ಉದ್ಯಾನದಲ್ಲಿ ವಯಸ್ಕರ ಅಸಭ್ಯ ವರ್ತನೆಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ತೋಟಗಾರಿಕೆ ಇಲಾಖೆ ಧ್ವನಿವರ್ಧಕ ಗಳನ್ನು ನೀಡಿದೆ.
‘ಉದ್ಯಾನಕ್ಕೆ ಬರುವ ಕೆಲವರ ವರ್ತನೆ ಮಿತಿ ಮೀರಿತ್ತು. ಕೆಲವು ಯುವಕ–ಯುವತಿಯರು ಮನ ಬಂದಂತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಕುಟುಂಬ ಸಮೇತ ಉದ್ಯಾನಕ್ಕೆ ಬರುವ ಹಿರಿಯರಿಗೆ, ಮಕ್ಕಳಿಗೆ, ಮಹಿಳೆಯರಿಗೆ ಇದು ಕಿರಿಕಿರಿಯಾಗುತ್ತಿತ್ತು. ಇದನ್ನು ತಡೆಯಲು ಭದ್ರತಾ ಸಿಬ್ಬಂದಿ ಧ್ವನಿವರ್ಧಕ ಬಳಸಿ ಎಚ್ಚರಿಕೆ ನೀಡುತ್ತಿದ್ದಾರೆ.
ಉದ್ಯಾನದಲ್ಲಿ ಇಂತಹ ಅಸಭ್ಯ ವರ್ತನೆಗಳಿಗೆ ಕಡಿವಾಣ ಬಿದ್ದಂತಾಗಿದೆ. ತೋಟಗಾರಿಕೆ ಇಲಾಖೆಯ ಈ ನೂತನ ಕ್ರಮ ಶ್ಲಾಘನೀಯ’ ಎಂದು ಕಬ್ಬನ್ ಉದ್ಯಾನದ ನಡಿಗೆದಾರು ತಿಳಿಸಿದ್ದಾರೆ.
‘ಉದ್ಯಾನದ ನಾಲ್ಕು ಪ್ರವೇಶ ದ್ವಾರಗಳಲ್ಲಿ ಕಾರ್ಯನಿರ್ವಹಿಸುವ ಭದ್ರತಾ ಸಿಬ್ಬಂದಿಗೆ ಧ್ವನಿವರ್ಧಕ ನೀಡಲಾಗಿದೆ. ಉದ್ಯಾನದಲ್ಲಿ ಸ್ವಚ್ಛತೆ ಕಾಪಾಡುವುದು, ಗಿಡ–ಮರಗಳಿಗೆ ಹಾನಿ ಮಾಡಬಾರದು ಎಂಬ ಎಚ್ಚರಿಕೆಯನ್ನು ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ’.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…