ಬೆಂಗಳೂರು ಕಮಿಷನರ್​ ಆಗಿ ಅಧಿಕಾರ ಸ್ವೀಕರಿಸಿದ ಪ್ರತಾಪ್​ ರೆಡ್ಡಿ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು ಕಮಿಷನರ್​ ಆಗಿ ಅಧಿಕಾರ ಸ್ವೀಕರಿಸಿದ ಪ್ರತಾಪ್​ ರೆಡ್ಡಿ

ಬೆಂಗಳೂರು: ರಾಜಧಾನಿಯ ನೂತನ ಪೊಲೀಸ್​ ಆಯುಕ್ತರಾಗಿ ನಮೇಕವಾದ ಎಡಿಜಿಪಿ ಸಿ.ಎಚ್​.ಪ್ರತಾಪ್​ ರೆಡ್ಡಿ ಅವರಿಗೆ ನಿರ್ಗಮಿತ ಕಮಿಷನರ್​ ಕಮಲ್​ ಪಂತ್ ಅವರು ಮಂಗಳವಾರ ಅಧಿಕಾರ ಹಸ್ತಾಂತರಿಸಿದರು. 1991ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿರುವ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್​ರೆಡ್ಡಿ, ಬೆಂಗಳೂರು ನಗರದ 35ನೇ ಕಮಿಷನರ್​ ಆಗಿ ಅಧಿಕಾರ ಸ್ವೀಕರಿಸಿದರು.

ಹೆಚ್ಚುವರಿ‌ ಪೊಲೀಸ್ ಆಯುಕ್ತರು, ನಗರದ ಎಲ್ಲ ಡಿಸಿಪಿಗಳು ಉಪಸ್ಥಿತರಿದ್ದರು.

ಬೆಂಗಳೂರಿನ ನ್ಯಾಷನಲ್​ ಅಸೋಸಿಯೇಷನ್​ ಆಫ್​ ಸಾಫ್ಟ್​ವೇರ್​ ಆಯಂಡ್​ ಸರ್ವೀಸಸ್​ ಕಂಪನೀಸ್​ (ಸೈಬರ್​ ಸೆಕ್ಯೂರಿಟಿ ವಿಂಗ್​) ಸಲಹೆಗಾರರಾಗಿ ಪ್ರತಾಪ್​ರೆಡ್ಡಿ ಕಾರ್ಯ ನಿರ್ವಹಿಸಿದ್ದರು. 1994ರಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದರು. ಕೆಲ ಕಾಲ ಸೈಬರ್​ ಸೆಕ್ಯೂರಿಟಿ ವಿಭಾಗದ ನಿರ್ದೇಶಕರಾಗಿದ್ದರು. ತಾಂತ್ರಿಕ ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿರುವ ವಿರಳ ಐಪಿಎಸ್​ ಅಧಿಕಾರಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ. ವಿಜಯಪುರ, ಕಲಬುರಗಿಯಲ್ಲಿ ಎಸ್​ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶಕ್ಕೆ ನೀರಿನ ಅಂಶ ಶೇಖರಣೆ ; ಕಿರುತೆರೆ ನಟಿ ಚೇತನಾ ರಾಜ್‌ ಸಾವು – Vishwnaews24

Leave a Reply