ಬೆಂಗಳೂರು: ರಾಜಧಾನಿಯ ನೂತನ ಪೊಲೀಸ್ ಆಯುಕ್ತರಾಗಿ ನಮೇಕವಾದ ಎಡಿಜಿಪಿ ಸಿ.ಎಚ್.ಪ್ರತಾಪ್ ರೆಡ್ಡಿ ಅವರಿಗೆ ನಿರ್ಗಮಿತ ಕಮಿಷನರ್ ಕಮಲ್ ಪಂತ್ ಅವರು ಮಂಗಳವಾರ ಅಧಿಕಾರ ಹಸ್ತಾಂತರಿಸಿದರು. 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್ರೆಡ್ಡಿ, ಬೆಂಗಳೂರು ನಗರದ 35ನೇ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದರು.
ಹೆಚ್ಚುವರಿ ಪೊಲೀಸ್ ಆಯುಕ್ತರು, ನಗರದ ಎಲ್ಲ ಡಿಸಿಪಿಗಳು ಉಪಸ್ಥಿತರಿದ್ದರು.
ಬೆಂಗಳೂರಿನ ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್ವೇರ್ ಆಯಂಡ್ ಸರ್ವೀಸಸ್ ಕಂಪನೀಸ್ (ಸೈಬರ್ ಸೆಕ್ಯೂರಿಟಿ ವಿಂಗ್) ಸಲಹೆಗಾರರಾಗಿ ಪ್ರತಾಪ್ರೆಡ್ಡಿ ಕಾರ್ಯ ನಿರ್ವಹಿಸಿದ್ದರು. 1994ರಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದರು. ಕೆಲ ಕಾಲ ಸೈಬರ್ ಸೆಕ್ಯೂರಿಟಿ ವಿಭಾಗದ ನಿರ್ದೇಶಕರಾಗಿದ್ದರು. ತಾಂತ್ರಿಕ ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿರುವ ವಿರಳ ಐಪಿಎಸ್ ಅಧಿಕಾರಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ. ವಿಜಯಪುರ, ಕಲಬುರಗಿಯಲ್ಲಿ ಎಸ್ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಉದ್ಯಾವರ :ಚರಂಡಿಗೆ ಬಿದ್ದ ಸಕ್ಕರೆ ಸಾಗಣೆ ಲಾರಿ; ಮದ್ಯದ ಅಮಲಿನಲ್ಲಿದ್ದ ಚಾಲಕ ವಶಕ್ಕೆ ಉಡುಪಿ: ರಾಷ್ಟ್ರೀಯ ಹೆದ್ದಾರಿ–66ರ ಉದ್ಯಾವರ ಸಮೀಪ…
ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಸಚಿವರಿಗೆ ನಿಯೋಗದಿಂದ ಮನವಿ ಬೆಂಗಳೂರು: ಪಡುಬಿದ್ರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ…
ಮೂಡಬಿದ್ರೆ: ಯುವತಿ ನಾಪತ್ತೆ ; ಪತ್ತೆಗೆ ಮನವಿ ಮೂಡಬಿದ್ರೆ: ಸಾಬಿರಾ ಬಾನು (20) ಎಂಬವರು ಜುಲೈ 27 ರಂದು ಕಾಣೆಯಾಗಿದ್ದು,…
ಉಡುಪಿ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯ ಕುಟುಂಬಕ್ಕೆ 1.45 ಕೋಟಿ ವಿಮಾ ಚೆಕ್ ಹಸ್ತಾಂತರ ಉಡುಪಿ: ಕರ್ತವ್ಯದಲ್ಲಿದ್ದಾಗ ರಸ್ತೆ…
ವಿಮೆ ಇಲ್ಲದ ವಾಹನಗಳಿಗೆ ಬಂಕ್ಗಳಲ್ಲಿ ಪೆಟ್ರೋಲ್ ನಿರಾಕರಣೆ : ಪ್ರಾಯೋಗಿಕ ಯೋಜನೆಗೆ ಕೇಂದ್ರಕ್ಕೆ ಸುಪ್ರೀಂ ಸೂಚನೆ ನವದೆಹಲಿ: ದೇಶದಲ್ಲಿ ವಿಮೆ ಇಲ್ಲದೆಯೇ…
ಮಂಗಳೂರು:ಭಾರೀ ಮಳೆಗೆ ಮತ್ತೆ ಕುಸಿಯಲಾರಂಭಿಸಿದ ಕೆತ್ತಿಕಲ್ ಗುಡ್ಡ ಅವೈಜ್ಞಾನಿಕ ಕಾಮಗಾರಿಗೆ ಸ್ಥಳೀಯರ ಆಕ್ಷೇಪ ಮಂಗಳೂರು: ವಾಮಂಜೂರು ತಿರುವೈಲು ಶಾಲೆಯ ಸಮೀಪದ…