ಕುಂದಾಪುರ: ಬೆಂಗಳೂರು – ಕುಂದಾಪುರ ನಡುವೆ ಭೂಕುಸಿತ ಹಾಗೂ ಹಲವು ವಾಹನ ಸಂಚಾರದ ರಸ್ತೆಗಳು ಬಂದ್ ಆಗಿರುವುದರಿಂದ ರಸ್ತೆ ಸಾರಿಗೆಯನ್ನೇ ನಂಬಿಕೊಂಡಿರುವ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ. ಈ ಎರಡು ಪ್ರಮುಖ ಸ್ಥಳಗಳ ನಡುವೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಉಡುಪಿ ಮತ್ತು ಕುಂದಾಪುರವನ್ನು ಬೆಂಗಳೂರಿಗೆ ಪಡೀಲ್ ಬೈಪಾಸ್ ಮೂಲಕ ಸಂಪರ್ಕಿಸಲು ವಿಶೇಷ ರಾತ್ರಿ ರೈಲು ಸೇವೆಯನ್ನು ಆರಂಭಿಸಬೇಕು ಎಂದು ರೈಲ್ವೇ ಇಲಾಖೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿಗೆ ಸ್ಪಂದನೆ ದೊರಕಿದೆ.
ಪರಿಣಾಮವಾಗಿ ಬೆಂಗಳೂರು ಮಂಗಳೂರು ರೈಲಿಗೆ ಮಡಗಾಂವ್ ಮಂಗಳೂರು ಜಂಕ್ಷನ್ ಮದ್ಯೆ ಮೂರು ದಿನಗಳ ವಿಶೇಷ ಲಿಂಕ್ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಈ ರೈಲುಗಳಿಗೆ ಗೋವಾದಿಂದ ಕುಂದಾಪುರ ಮಾರ್ಗವಾಗಿ ಸಂಪರ್ಕ ರೈಲು ಸೇವೆ ಆರಂಭಿಸಲು ರೈಲ್ವೇ ಇಲಾಖೆ ಅಸ್ತು ಎಂದಿದೆ. ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಇಂಜಿನ್ ಬದಲಾವಣೆ, ನೀರು ತುಂಬುವಿಕೆಯಂತ ವಿಳಂಭಧ ಕಾರಣದಿಂದ ಪ್ರತ್ಯೇಕ ಲಿಂಕ್ ರೈಲಿಗಾಗಿ ಮಾಡಲಾಗಿದ್ದ ಸಂಸದರ ಪತ್ರಕ್ಕೆ ರೈಲ್ವೇ ಸಚಿವಾಲಯ ಸ್ಪಂದಿಸಿದೆ. ಇದರಿಂದಾಗಿ ಬೆಂಗಳೂರು ಮಂಗಳೂರು ವಿಶೇಷ ರೈಲು ಬಂದ ಕೆಲವೇ ಹೊತ್ತಲ್ಲಿ ಉಡುಪಿ ಕುಂದಾಪುರ ಮಾರ್ಗವಾಗಿ ಗೋವಾ ಕಡೆ ತೆರಳಲಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…