ಕುಂದಾಪುರ: ಬೆಂಗಳೂರು – ಕುಂದಾಪುರ ನಡುವೆ ಭೂಕುಸಿತ ಹಾಗೂ ಹಲವು ವಾಹನ ಸಂಚಾರದ ರಸ್ತೆಗಳು ಬಂದ್ ಆಗಿರುವುದರಿಂದ ರಸ್ತೆ ಸಾರಿಗೆಯನ್ನೇ ನಂಬಿಕೊಂಡಿರುವ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ. ಈ ಎರಡು ಪ್ರಮುಖ ಸ್ಥಳಗಳ ನಡುವೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಉಡುಪಿ ಮತ್ತು ಕುಂದಾಪುರವನ್ನು ಬೆಂಗಳೂರಿಗೆ ಪಡೀಲ್ ಬೈಪಾಸ್ ಮೂಲಕ ಸಂಪರ್ಕಿಸಲು ವಿಶೇಷ ರಾತ್ರಿ ರೈಲು ಸೇವೆಯನ್ನು ಆರಂಭಿಸಬೇಕು ಎಂದು ರೈಲ್ವೇ ಇಲಾಖೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿಗೆ ಸ್ಪಂದನೆ ದೊರಕಿದೆ.
ಪರಿಣಾಮವಾಗಿ ಬೆಂಗಳೂರು ಮಂಗಳೂರು ರೈಲಿಗೆ ಮಡಗಾಂವ್ ಮಂಗಳೂರು ಜಂಕ್ಷನ್ ಮದ್ಯೆ ಮೂರು ದಿನಗಳ ವಿಶೇಷ ಲಿಂಕ್ ರೈಲಿನ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಈ ರೈಲುಗಳಿಗೆ ಗೋವಾದಿಂದ ಕುಂದಾಪುರ ಮಾರ್ಗವಾಗಿ ಸಂಪರ್ಕ ರೈಲು ಸೇವೆ ಆರಂಭಿಸಲು ರೈಲ್ವೇ ಇಲಾಖೆ ಅಸ್ತು ಎಂದಿದೆ. ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ ಇಂಜಿನ್ ಬದಲಾವಣೆ, ನೀರು ತುಂಬುವಿಕೆಯಂತ ವಿಳಂಭಧ ಕಾರಣದಿಂದ ಪ್ರತ್ಯೇಕ ಲಿಂಕ್ ರೈಲಿಗಾಗಿ ಮಾಡಲಾಗಿದ್ದ ಸಂಸದರ ಪತ್ರಕ್ಕೆ ರೈಲ್ವೇ ಸಚಿವಾಲಯ ಸ್ಪಂದಿಸಿದೆ. ಇದರಿಂದಾಗಿ ಬೆಂಗಳೂರು ಮಂಗಳೂರು ವಿಶೇಷ ರೈಲು ಬಂದ ಕೆಲವೇ ಹೊತ್ತಲ್ಲಿ ಉಡುಪಿ ಕುಂದಾಪುರ ಮಾರ್ಗವಾಗಿ ಗೋವಾ ಕಡೆ ತೆರಳಲಿದೆ.
ಬೆಂಗಳೂರು: ಏರ್ಪೋರ್ಟ್ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ 1.37…
ಬಾರ್, ಪಬ್ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…