Featured

ಬೆಂಗಳೂರು ಕೆಫೆ ಬ್ಲಾಸ್ಟ್‌ ಪ್ರಕರಣ : ಮತ್ತಿಬ್ಬರು NIA ವಶಕ್ಕೆ – vishwanews24

ಬೆಂಗಳೂರು ಕೆಫೆ ಬ್ಲಾಸ್ಟ್‌ ಪ್ರಕರಣ : ಮತ್ತಿಬ್ಬರು NIA ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌  ಪ್ರಕರಣದಲ್ಲಿ ಮತ್ತಿಬ್ಬರನ್ನು ಎನ್‌ಐಎ  ವಶಕ್ಕೆ ಪಡೆದಿದೆ. ಶಂಕಿತರ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯದ ಹಲವೆಡೆ ಎನ್‌ಐಎ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ರಾಮೇಶ್ವರಂ ಕೆಫೆ ಸ್ಫೋಟ ಹಾಗೂ ಹಳೇ ಪ್ರಕರಣಗಳ ನಡುವೆ ಸಾಮ್ಯತೆ ಇರಬಹುದು ಎನ್ನಲಾಗಿದೆ. ಹೀಗಾಗಿ ಹಳೇ ಪ್ರಕರಣಗಳಲ್ಲಿ ಭಾಗಿಯಾದ ಹಲವರ ಮೇಲೆ ಎನ್ಐಎ ನಿಗಾವಹಿಸಿದೆ.

ಈಗಾಗಲೇ ಜೈಲಿನಲ್ಲಿರುವ ಹಲವರನ್ನು ಎನ್‌ಐಎ ವಿಚಾರಣೆ ನಡೆಸಿದೆ. ತಲೆಮರೆಸಿಕೊಂಡಿರುವ ಇನ್ನೂ ಕೆಲವರ ಪತ್ತೆಗೆ ಬಲೆ ಬೀಸಿದೆ. ಶಂಕಿತರಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನೆರವು ನೀಡಿದವರ ಮೇಲೆ ಎನ್ಐಎ ಕಣ್ಣಿಟ್ಟಿದೆ. ಅಂಥವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸುತ್ತಿದೆ.

ಅನುಮಾನಸ್ಪದ ವ್ಯಕ್ತಿಗಳಿಂದ ಸ್ಫೋಟ ನಡೆಸಿದವರ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ತಾಂತ್ರಿಕವಾಗಿ ಅಥವಾ ಮೌಖಿಕವಾಗಿ ಮಾಹಿತಿ ಲಭ್ಯವಾಗಬಹುದು. ಆದ್ದರಿಂದ ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸುತ್ತಿದೆ. ಆ ಮೂಲಕ ಸ್ಫೋಟ ನಡೆಸಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಬಲೆ‌ ಬೀಸಿದೆ.

ಮೊಬೈಲ್ ಕರೆಗಳು, ವಾಟ್ಸಪ್ ಚಾಟಿಂಗ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬಾಂಬ್ ಸ್ಫೋಟ ಮಾಡಿದ ಆರೋಪಿಗಳ ಪತ್ತೆಗೆ ಎನ್ಐಎ ತಲಾಷ್ ನಡೆಸಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

22 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

22 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago