Featured

ಬೆಂಗಳೂರು ಕೆಫೆ ಬ್ಲಾಸ್ಟ್‌ ಪ್ರಕರಣ : ಮತ್ತಿಬ್ಬರು NIA ವಶಕ್ಕೆ – vishwanews24

ಬೆಂಗಳೂರು ಕೆಫೆ ಬ್ಲಾಸ್ಟ್‌ ಪ್ರಕರಣ : ಮತ್ತಿಬ್ಬರು NIA ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್‌  ಪ್ರಕರಣದಲ್ಲಿ ಮತ್ತಿಬ್ಬರನ್ನು ಎನ್‌ಐಎ  ವಶಕ್ಕೆ ಪಡೆದಿದೆ. ಶಂಕಿತರ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯದ ಹಲವೆಡೆ ಎನ್‌ಐಎ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ರಾಮೇಶ್ವರಂ ಕೆಫೆ ಸ್ಫೋಟ ಹಾಗೂ ಹಳೇ ಪ್ರಕರಣಗಳ ನಡುವೆ ಸಾಮ್ಯತೆ ಇರಬಹುದು ಎನ್ನಲಾಗಿದೆ. ಹೀಗಾಗಿ ಹಳೇ ಪ್ರಕರಣಗಳಲ್ಲಿ ಭಾಗಿಯಾದ ಹಲವರ ಮೇಲೆ ಎನ್ಐಎ ನಿಗಾವಹಿಸಿದೆ.

ಈಗಾಗಲೇ ಜೈಲಿನಲ್ಲಿರುವ ಹಲವರನ್ನು ಎನ್‌ಐಎ ವಿಚಾರಣೆ ನಡೆಸಿದೆ. ತಲೆಮರೆಸಿಕೊಂಡಿರುವ ಇನ್ನೂ ಕೆಲವರ ಪತ್ತೆಗೆ ಬಲೆ ಬೀಸಿದೆ. ಶಂಕಿತರಿಗೆ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನೆರವು ನೀಡಿದವರ ಮೇಲೆ ಎನ್ಐಎ ಕಣ್ಣಿಟ್ಟಿದೆ. ಅಂಥವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸುತ್ತಿದೆ.

ಅನುಮಾನಸ್ಪದ ವ್ಯಕ್ತಿಗಳಿಂದ ಸ್ಫೋಟ ನಡೆಸಿದವರ ಬಗ್ಗೆ ಸುಳಿವು ಸಿಗುವ ಸಾಧ್ಯತೆ ಇದೆ. ತಾಂತ್ರಿಕವಾಗಿ ಅಥವಾ ಮೌಖಿಕವಾಗಿ ಮಾಹಿತಿ ಲಭ್ಯವಾಗಬಹುದು. ಆದ್ದರಿಂದ ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸುತ್ತಿದೆ. ಆ ಮೂಲಕ ಸ್ಫೋಟ ನಡೆಸಿ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಬಲೆ‌ ಬೀಸಿದೆ.

ಮೊಬೈಲ್ ಕರೆಗಳು, ವಾಟ್ಸಪ್ ಚಾಟಿಂಗ್ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಬಾಂಬ್ ಸ್ಫೋಟ ಮಾಡಿದ ಆರೋಪಿಗಳ ಪತ್ತೆಗೆ ಎನ್ಐಎ ತಲಾಷ್ ನಡೆಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago