ಬೆಂಗಳೂರು : ಕೌಟುಂಬಿಕ ಕಲಹ; ಮನನೊಂದು ಉದ್ಯಮಿ ಆತ್ಮಹತ್ಯೆ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಕೌಟುಂಬಿಕ ಕಲಹ; ಮನನೊಂದ ಉದ್ಯಮಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಾರಣಗಳಿಂದ ಮನನೊಂದ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಹಾಲಕ್ಷ್ಮೀ ಲೇಔಟ್‌ ನಿವಾಸಿ ಎಂ.ಜಿ. ಸೋಮಶೇಖರ್‌(47) ಆತ್ಮಹತ್ಯೆ ಮಾಡಿಕೊಂಡವರು.

ಶಿರ್ವ : ವ್ಯಕ್ತಿ ನಾಪತ್ತೆ – vishwanews24

ಭಾನುವಾರ ರಾತ್ರಿ 11 ಗಂಟೆಗೆ ಸೋಮಶೇಖರ್‌ ಮನೆಯ ಕೋಣೆಯಲ್ಲೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದನ್ನು ಗಮನಿಸಿದ ಪತ್ನಿ ಹಾಗೂ ಮಕ್ಕಳು ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ, ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸೋಮವಾರ ಬೆಳಗ್ಗೆ 11 ಗಂಟೆಗೆ ಸೋಮಶೇಖರ್‌ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಮೃತ ಸೋಮಶೇಖರ್‌ ಲಾರಿ ವ್ಯವಹಾರ ಮಾಡುತ್ತಿದ್ದು, 2005ನೇ ಸಾಲಿನಲ್ಲಿ ಪವಿತ್ರಾ ಎಂಬವರನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಇದ್ದರು. ಪಿಯುಸಿ ಮುಗಿಸಿದ್ದ ಪವಿತ್ರಾಳನ್ನು ಮದುವೆ ಬಳಿಕ ಸೋಮಶೇಖರ್‌ ಕಾಲೇಜಿಗೆ ಸೇರಿಸಿ ಬಿ.ಕಾಂ ಓದಿಸಿದ್ದರು. ಬಳಿಕ ಪವಿತ್ರಾ ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಕೌಟುಂಬಿಕ ಕಾರಣಗಳಿಗೆ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎಂಬುದು ಗೊತ್ತಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಉಡುಪಿ: ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಹಾಗೂ ಕಡಲ ತೀರಗಳಿಗೆ ಭೇಟಿ ನೀಡುವ ಪ್ರವಾಸಿಗರ ಜೀವ ರಕ್ಷಣೆ ಕುರಿತು – vishwanews24

Leave a Reply