ಬೆಂಗಳೂರು: ಕೌಟುಂಬಿಕ ಕಾರಣಗಳಿಂದ ಮನನೊಂದ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾಲಕ್ಷ್ಮೀ ಲೇಔಟ್ ನಿವಾಸಿ ಎಂ.ಜಿ. ಸೋಮಶೇಖರ್(47) ಆತ್ಮಹತ್ಯೆ ಮಾಡಿಕೊಂಡವರು.
ಭಾನುವಾರ ರಾತ್ರಿ 11 ಗಂಟೆಗೆ ಸೋಮಶೇಖರ್ ಮನೆಯ ಕೋಣೆಯಲ್ಲೇ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದನ್ನು ಗಮನಿಸಿದ ಪತ್ನಿ ಹಾಗೂ ಮಕ್ಕಳು ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ, ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸೋಮವಾರ ಬೆಳಗ್ಗೆ 11 ಗಂಟೆಗೆ ಸೋಮಶೇಖರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಮೃತ ಸೋಮಶೇಖರ್ ಲಾರಿ ವ್ಯವಹಾರ ಮಾಡುತ್ತಿದ್ದು, 2005ನೇ ಸಾಲಿನಲ್ಲಿ ಪವಿತ್ರಾ ಎಂಬವರನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಇದ್ದರು. ಪಿಯುಸಿ ಮುಗಿಸಿದ್ದ ಪವಿತ್ರಾಳನ್ನು ಮದುವೆ ಬಳಿಕ ಸೋಮಶೇಖರ್ ಕಾಲೇಜಿಗೆ ಸೇರಿಸಿ ಬಿ.ಕಾಂ ಓದಿಸಿದ್ದರು. ಬಳಿಕ ಪವಿತ್ರಾ ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಕೌಟುಂಬಿಕ ಕಾರಣಗಳಿಗೆ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎಂಬುದು ಗೊತ್ತಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…