ಬೆಂಗಳೂರು: ಕೌಟುಂಬಿಕ ಕಾರಣಗಳಿಂದ ಮನನೊಂದ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾಲಕ್ಷ್ಮೀ ಲೇಔಟ್ ನಿವಾಸಿ ಎಂ.ಜಿ. ಸೋಮಶೇಖರ್(47) ಆತ್ಮಹತ್ಯೆ ಮಾಡಿಕೊಂಡವರು.
ಭಾನುವಾರ ರಾತ್ರಿ 11 ಗಂಟೆಗೆ ಸೋಮಶೇಖರ್ ಮನೆಯ ಕೋಣೆಯಲ್ಲೇ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದನ್ನು ಗಮನಿಸಿದ ಪತ್ನಿ ಹಾಗೂ ಮಕ್ಕಳು ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ, ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸೋಮವಾರ ಬೆಳಗ್ಗೆ 11 ಗಂಟೆಗೆ ಸೋಮಶೇಖರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಮೃತ ಸೋಮಶೇಖರ್ ಲಾರಿ ವ್ಯವಹಾರ ಮಾಡುತ್ತಿದ್ದು, 2005ನೇ ಸಾಲಿನಲ್ಲಿ ಪವಿತ್ರಾ ಎಂಬವರನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಇದ್ದರು. ಪಿಯುಸಿ ಮುಗಿಸಿದ್ದ ಪವಿತ್ರಾಳನ್ನು ಮದುವೆ ಬಳಿಕ ಸೋಮಶೇಖರ್ ಕಾಲೇಜಿಗೆ ಸೇರಿಸಿ ಬಿ.ಕಾಂ ಓದಿಸಿದ್ದರು. ಬಳಿಕ ಪವಿತ್ರಾ ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಕೌಟುಂಬಿಕ ಕಾರಣಗಳಿಗೆ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು ಎಂಬುದು ಗೊತ್ತಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…