ಬೆಂಗಳೂರು: ‘ಗರುಡಾ ಗ್ಯಾಂಗ್’ನ ಉಡುಪಿ ಮೂಲದ ರೌಡಿ ಶೀಟರ್ ಗಳ ಮೇಲೆ ಪೊಲೀಸ್ ಫೈರಿಂಗ್
ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ಬೆಂಗಳೂರಿನಲ್ಲಿ ಇಬ್ಬರು ಉಡುಪಿ ಮೂಲದ ರೌಡಿಶೀಟರ್ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಮೂಲತಃ ಉಡುಪಿ ಅಶಿಕ್ ಮೂಳೂರು ಮತ್ತು ಇಸಾಕ್ ಕಾಲಿಗೆ ಗುಂಡೇಟು ತಿಂದ ಪಾತಕಿಗಳು. ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಿ ಆರೋಪಿಗಳ ಸೆರೆ ಹಿಡಿಯಲಾಗಿದೆ.
ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ಕಾರನ್ನು ಅಡ್ಡಗಟ್ಟಿ ಮಾರ್ಚ್ 26 ರಂದು ವ್ಯಕ್ತಿ ಸುಲಿಗೆ ಮಾಡಲಾಗಿತ್ತು. ಸುಲಿಗೆ ಬಳಿಕ
ಆರೋಪಿ ಡೆಡ್ಲಿ ದರೋಡೆಕೋರರು ಪೊಲೀಸ್ ಸಬ್ಇನ್ಸ್ಪೆಕ್ಟರ್ ಉಮೇಶ್ ಎದೆಗೆ ಚಾಕು ಇರಿದಿದ್ದರು. ಗಾಯಾಳು ಪಿಎಸ್ಐ ಉಮೇಶ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಗುಂಡೇಟು ಬಿದ್ದು ಬಂಧಿತರಾಗಿರುವ ಆರೋಪಿಗಳನ್ನು ಚಿಕಿತ್ಸೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಶಿಕ್ ಮೂಳೂರು ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಹೈವೇಯಲ್ಲಿ ಮೀನು ಗಾಡಿಯ ಚಾಲಕನ ಅಡ್ಡಗಟ್ಟಿ 2ಲಕ್ಷ₹ ದರೋಡೆ ಮಾಡಿದ ಪ್ರಕರಣ ಇತ್ತೀಚೆಗೆ ದಾಖಲಾಗಿದ್ದು, ಹಾಗೂ ಇತ್ತೀಚೆಗೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಓರ್ವನಿಗೆ ಬೆದರಿಸಿ ಹಾಕಿರುವ ಪ್ರಕರಣ ಸಹ ದಾಖಲಾಗಿದೆ.
ಅಲ್ಲದೆ ಮಂಕಿ ಪೊಲೀಸ್ ಠಾಣೆಯಲ್ಲಿ 2ಪ್ರಕರಣ, ಬೈಂದೂರು ಪೊಲೀಸ್ ಠಾಣೆಯಲ್ಲಿ 2 ಪ್ರಕರಣ, ಮಣಿಪಾಲದಲ್ಲಿ 1ಪ್ರಕರಣ, ಕಾರ್ಕಳ ನಗರ ಠಾಣೆಯಲ್ಲಿ 2ಪ್ರಕರಣ, ಕಂಕನಾಡಿಯಲ್ಲಿ 1ಪ್ರಕರಣ ದಾಖಲಾಗಿರುತ್ತದೆ.
ಏನಿದು ʼಟೀಂ ಗರುಡ 900ʼ
ಆರೋಪಿಗಳೂ ಚಿಕ್ಕ ವಯಸ್ಸಿನಲ್ಲೇ ದರೋಡೆ, ಸುಲಿಗೆ, ಕಳ್ಳತನ, ಹಸುಗಳ್ಳತನ, ಕೃತ್ಯದಲ್ಲಿ ತೊಡಗುತ್ತಿದ್ದರು. ಉಡುಪಿ, ಮಂಗಳೂರು, ಕುಂದಾಪುರ ಕಡೆ ʼಟೀಂ ಗರುಡ 900ʼ ಹೆಸರಿನ ತಂಡ ರಚಿಸಿ ರಾತ್ರಿ ಹೊತ್ತು ಓಡಾಡುವವರನ್ನು ದರೋಡೆ ಮಾಡುತ್ತಿದ್ದರು. ಬಂದ ಹಣದಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದರು. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬಂಧನಕ್ಕೊಳಗಾಗಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯದಿಂದ ಹೊರಡಿಸಿರುವ ವಿವಿಧ ಪೊಲೀಸ್ ಠಾಣೆಗಳಲ್ಲಿ 10 ವಾರೆಂಟ್ ಬಾಕಿ ಇತ್ತು. ಆರೋಪಿಗಳ ಪತ್ತೆಗಾಗಿ ಕೊತ್ತನೂರು ಪೊಲೀಸರು ವಿಶೇಷ ತಂಡ ರಚಿಸಿ ಕೃತ್ಯ ನಡೆದ ಸ್ಥಳಗಳಲ್ಲಿ ಸಿಸಿ ಕ್ಯಾಮಾರ ಪರಿಶೀಲಿಸಿದಾಗ ಆರೋಪಿಗಳು ದರೋಡೆ ಮಾಡಿರುವ ದೃಶ್ಯ ಸೆರೆಯಾಗಿತ್ತು. ಉಡುಪಿ, ಮಂಗಳೂರು ಮತ್ತಿತರ ಕಡೆಗಳಿಗೆ ಹೋಗಿದ್ದ ಪೊಲೀಸರ ತಂಡ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿತ್ತು.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…