ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಸಂಬಂಧ ಉಂಟಾಗಿರುವಂತ ಆಸ್ತಿ-ಪಾಸ್ತಿಯ ನಷ್ಟವನ್ನು ಸುಪ್ರೀಂ ಕೋರ್ಟ್ ಆದೇಶದನ್ವಯ ಆರೋಪಿಗಳಿಂದಲೇ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ಕುರಿತಂತೆ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸದ್ಯ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲೇ ತನಿಖೆ ನಡೆಯುತ್ತಿದೆ. ಪೊಲೀಸ್ ಇಲಾಖೆಯೂ ಗಲಭೆಯ ತನಿಖೆ ಮಾಡ್ತಿದೆ. ತನಿಖೆ ಮುಗಿಯೋವರೆಗೂ ಬೇರೆ ತನಿಖೆ ನಡೆಸುವುದಿಲ್ಲ. ಸದ್ಯಕ್ಕೆ ಈ ಎರಡೂ ತನಿಖೆಗಳಿಗೆ ಸರ್ಕಾರ ಬದ್ಧವಾಗಿದೆ. ಸಿಬಿಐ, ಎನ್ ಐ ಎ ತನಿಖೆಯ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ತಿಳಿಸಿದರು.
ಗಲಭೆಕೋರರ ಹಿಂದೆ ಉಗ್ರ ಸಂಘಟನೆ ಲಿಂಕ್ ಇದ್ಯಾ ಎನ್ನುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಬಂಧನಕ್ಕೆ ಒಳಗಾದ ಆರೋಪಿಗಳ ಹಿನ್ನಲೆ ಕೂಡ ತನಿಖೆ ನಡೆಸಲಾಗುತ್ತದೆ. ವಿಚಾರಣೆಗೆ 3 ಸದಸ್ಯರನ್ನೊಳಗೊಂಡ ವಿಶೇಷ ಅಭಿಯೋಜಕರ ತಂಡ ರಚನೆ ಮಾಡಲಾಗಿದೆ. ಗೂಂಡಾ ಕಾಯ್ದೆಯಡಿ ಕೂಡ ಗಲಭೆಕೋರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇನ್ನೂ ಮುಂದುವರೆದು ಮಾತನಾಡಿದ ಅವರು ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡಲಾಗುತ್ತದೆ. ಆಸ್ತಿ ಪಾಸ್ತಿ ನಷ್ಟ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಎಜಿ ಕರೆಸಿ ಮಾಹಿತಿಯನ್ನು ಸಿಎಂ ಅವರು ಪಡೆದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದನ್ವಯ ಆಸ್ತಿ ನಷ್ಟ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…