Featured

ಬೆಂಗಳೂರು ಗಲಭೆ : ಆರೋಪಿಗಳಿಂದಲೇ ನಷ್ಟ ವಸೂಲಿ: ಬಸವರಾಜ್ ಬೊಮ್ಮಾಯಿ -Vishwanews24

ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಸಂಬಂಧ ಉಂಟಾಗಿರುವಂತ ಆಸ್ತಿ-ಪಾಸ್ತಿಯ ನಷ್ಟವನ್ನು ಸುಪ್ರೀಂ ಕೋರ್ಟ್ ಆದೇಶದನ್ವಯ ಆರೋಪಿಗಳಿಂದಲೇ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ಕುರಿತಂತೆ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸದ್ಯ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲೇ ತನಿಖೆ ನಡೆಯುತ್ತಿದೆ. ಪೊಲೀಸ್ ಇಲಾಖೆಯೂ ಗಲಭೆಯ ತನಿಖೆ ಮಾಡ್ತಿದೆ. ತನಿಖೆ ಮುಗಿಯೋವರೆಗೂ ಬೇರೆ ತನಿಖೆ ನಡೆಸುವುದಿಲ್ಲ. ಸದ್ಯಕ್ಕೆ ಈ ಎರಡೂ ತನಿಖೆಗಳಿಗೆ ಸರ್ಕಾರ ಬದ್ಧವಾಗಿದೆ. ಸಿಬಿಐ, ಎನ್ ಐ ಎ ತನಿಖೆಯ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ತಿಳಿಸಿದರು.

ಗಲಭೆಕೋರರ ಹಿಂದೆ ಉಗ್ರ ಸಂಘಟನೆ ಲಿಂಕ್ ಇದ್ಯಾ ಎನ್ನುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಬಂಧನಕ್ಕೆ ಒಳಗಾದ ಆರೋಪಿಗಳ ಹಿನ್ನಲೆ ಕೂಡ ತನಿಖೆ ನಡೆಸಲಾಗುತ್ತದೆ.  ವಿಚಾರಣೆಗೆ 3 ಸದಸ್ಯರನ್ನೊಳಗೊಂಡ ವಿಶೇಷ ಅಭಿಯೋಜಕರ ತಂಡ ರಚನೆ ಮಾಡಲಾಗಿದೆ. ಗೂಂಡಾ ಕಾಯ್ದೆಯಡಿ ಕೂಡ ಗಲಭೆಕೋರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇನ್ನೂ ಮುಂದುವರೆದು ಮಾತನಾಡಿದ ಅವರು ಗಲಭೆಕೋರರಿಂದಲೇ ನಷ್ಟ ವಸೂಲಿ ಮಾಡಲಾಗುತ್ತದೆ. ಆಸ್ತಿ ಪಾಸ್ತಿ ನಷ್ಟ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತು ಎಜಿ ಕರೆಸಿ ಮಾಹಿತಿಯನ್ನು ಸಿಎಂ ಅವರು ಪಡೆದಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದನ್ವಯ ಆಸ್ತಿ ನಷ್ಟ ವಸೂಲಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಹೇಳಿದರು.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

2 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago