ಬೆಂಗಳೂರು ಗಲಭೆ :ಗಲಭೆಗೆ ಕಾರಣವಾದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳಿ ಸರ್ಕಾರಕ್ಕೆ ನಮ್ಮ ಸಂಪೂರ್ಣ ಸಹಕಾರವಿದೆ : ಸಿದ್ದರಾಮಯ್ಯ -Vishwanews24

ಬೆಂಗಳೂರು ಗಲಭೆ ಸೃಷ್ಟಿಸಿದ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ದ ಕ್ರಮ ಕೈಗೊಳ್ಳಿ, ಸರ್ಕಾರಕ್ಕೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.

 

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿಯೋರ್ವ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಹಾಕಿದ್ದರೆಂಬ ಕಾರಣಕ್ಕೆ ಕೆ.ಕಿ ಹಳ್ಳಿ, ಡಿ.ಜೆ ಹಳ್ಳಿ, ಕಾವಲ್ ಬೈರಸಂದ್ರದಲ್ಲಿ ಗಲಭೆ ಸೃಷ್ಟಿಸಿ ಬೆಂಕಿ ಹಾಕಿದ ಘಟನೆ ಹಾಗೂ ಪೋಸ್ಟ್‌ ಹಾಕುವ ಮೂಲಕ ಪ್ರಚೋಧನೆ ನೀಡಿರುವುದನ್ನು ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ ಮೂಲಕ ಖಂಡಿಸಿದ್ದಾರೆ.

”ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ. ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ” ಎಂದು ಹೇಳಿದ್ದಾರೆ.

”ಇಂತಹ ಕೋಮು ಗಲಭೆಗಳಲ್ಲಿ‌ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.

”ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ‌ ಕಳೆದು ಕೊಳ್ಳಬಾರದು. ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

24 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago