ಉಡುಪಿ: ಬೆಂಗಳೂರು ಗಲಬೆಗೆ ಸಂಬಂಧಿಸಿ ಫೇಸ್ಬುಕ್ ನಲ್ಲಿ ಚರ್ಚೆ ಮಾಡಿ ಕರೆ ಕೊಟ್ಟಿದ್ದಾರೆ. ಸ್ಥಳೀಯರು ಪ್ಲಾನ್ ಮಾಡಿ ಈ ಕೃತ್ಯ ಎಸಗಿದ್ದು, ಇದು ಪೂರ್ವ ನಿಯೋಜಿತ ಷಡ್ಯಂತ್ರ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಂಡಾಟದ ಮೂಲಕ ಸಮಾಜ ಹದಗೆಡಿಸಲು ಹಲವು ಪ್ರಯತ್ನ ಮಾಡಿದ್ದಾರೆ. ಗಲಬೆ ನಿಯಂತ್ರಣ ಸಂಪೂರ್ಣ ತಪ್ಪಿದಾಗ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮನಸೋಇಚ್ಛೆ ವರ್ತಿಸಿದಾಗ ಕೊನೆಯ ಅಸ್ತ್ರವಾಗಿ ಗೋಲಿಬಾರ್ ಮಾಡಲಾಗಿದೆ. ಮೂರು ಜನ ಗೋಲಿಬಾರ್ ನಲ್ಲಿ ಅಸುನೀಗಿದ್ದಾರೆ.ಪೊಲೀಸರಿಗೂ ಕಲ್ಲುತೂರಾಟದಿಂದ ಗಾಯಗಳಾಗಿವೆ. ಓರ್ವ ಪೋಲೀಸ್ ತಲೆಗೆ ಗಂಭೀರ ಗಾಯವಾಗಿದೆ.
ಮೂರು ಹೈದರಾಬಾದಿನಿಂದ ಮೂರು ಚೆನ್ನೈನಿಂದ ಬರ್ತಾ ಇದೆ. ಆರು ಕಂಪನಿಯನ್ನು ಎಲ್ಲಿಡಿಪ್ಲೈ ಮಾಡಬೇಕು ಅನ್ನೋದನ್ನ ಪೊಲೀಸ್ ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ರ್ಯಾಪಿಡ್ ಅಕ್ಷನ್ ಫಾರ್ಸ್ ಬರ್ತಾಯಿದೆ.ಗರುಡ ಫೋರ್ಸ್ ಕೂಡ ಸ್ಥಳದಲ್ಲಿದೆ.ಪುಂಡರ ಹಿಂದೆ ಯಾರಿದ್ದಾರೆ ಎಂದು ತನಿಖೆ ಮಾಡುತ್ತೇವೆ. ಸಿಎಂ ಜೊತೆ ಬೆಳಗ್ಗೆ ಬಗ್ಗೆ ಚರ್ಚೆ ಮಾಡಿದ್ದೇನೆ. ಮಧ್ಯಾಹ್ನ ಸಿಎಂ ಮತ್ತು ಹಿರಿಯ ಅಧಿಕಾರಿ ಜೊತೆ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ.
ಸಿಸಿ ಕ್ಯಾಮರ ದಾಖಲೆ ಪೊಲೀಸ್ ಠಾಣೆಯ ದಾಖಲೆ ಸಂಗ್ರಹಿಸುತ್ತೇವೆ. ಪುಂಡಾಟಿಕೆ ಮುಂಚೂಣಿಯಲ್ಲಿದ್ದವರ ಮಾಹಿತಿ ಸಂಗ್ರಹವಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…