ಬೆಂಗಳೂರು ಗಲಭೆ ಪ್ರಕರಣ : ಕಾಂಗ್ರೆಸ್‌ ಪಕ್ಷದ ಮುಖವಾಡ ಕಳಚಿದೆ : ಡಾ.ಸುಧಾಕರ್‌ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖವಾಡ ಕಳಚಿದೆ. ಕೀಚಕರ ಹೆಡೆಮುರಿಕಟ್ಟುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖವಾಡ ಕಳಚಿದೆ. ಕ್ರೌರ್ಯದ ಮನಃಸ್ಥಿತಿಯ ದ್ಯೋತಕವಾಗಿ ಪುಂಡಾಟಿಕೆ ಮೆರೆದಿದ್ದ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ‌ ಕಲೀಂಪಾಷರನ್ನುಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೀಚಕರ ಹೆಡೆಮುರಿಕಟ್ಟುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಕಾಂಗ್ರೆಸ್‌ನವರಿಗೆ ಈಗಲಾದ್ರೂ ನಿಜ ಸತ್ಯದ ಅರಿವಾಯಿತೇ ಎಂದು ಕೇಳಿದ್ದಾರೆ.