ಬೆಂಗಳೂರು : ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಮೋಹನ್ ಭಾಗವತ್ – vishwanews24
ಬೆಂಗಳೂರು : ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಮೋಹನ್ ಭಾಗವತ್
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕಿಂದು ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನ ಪಡೆದರು. ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಬೇಂಢೆ, ಕ್ಷೇತ್ರೀಯ ಪ್ರಚಾರಕ್ ಭರತ್ ಕುಮಾರ್ ಉಪಸ್ಥಿತರಿದ್ದರು.
ರಾಷ್ಟೀಯ ಸ್ವಯಂಸೇವಕ ಸಂಘವು ಕಳೆದ ವಿಜಯದಶಮಿಯಂದು (ಅಕ್ಟೋಬರ್ 2, 2025) ತನ್ನ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಶತಾಬ್ದಿ ವರ್ಷದಲ್ಲಿ ವಿಜಯದಶಮಿ ಉತ್ಸವಗಳು, ಯುವ ಸಮಾವೇಶ, ಮನೆಮನೆ ಸಂಪರ್ಕ, ಹಿಂದೂ ಸಮ್ಮೇಳನ, ಸಾಮಾಜಿಕ ಸದ್ಭಾವನಾ ಸಮಾವೇಶ, ಪ್ರಮುಖ ನಾಗರಿಕರ ವಿಚಾರಗೋಷ್ಠಿ ಮುಂತಾದ ವಿವಿಧ ಚಟುವಟಿಕೆಗಳನ್ನು ದೇಶಾದ್ಯಂತ ಹಮ್ಮಿಕೊಳ್ಳುತ್ತಾ ಬರುತ್ತಿದೆ.
ಇದರ ಮುಂದುವರಿದ ಹಾದಿಯಾಗಿ ಬೆಂಗಳೂರಿನಲ್ಲಿ ನವೆಂಬರ್ 8 ಮತ್ತು 9ರಂದು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಡಾ.ಮೋಹನ್ ಭಾಗವತ್ ಮಾತನಾಡಲಿದ್ದಾರೆ. ಈ ಹಿನ್ನೆಲೆ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಸಾಬೀತು : ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ – vishwanews24
