Featured

ಬೆಂಗಳೂರು : ಗೊರಕೆ ನಿಲ್ಲಿಸುವ ಟೋಪಿ ಮಾರಾಟ ಮಾಡಿದರೆ ಹೆಚ್ಚು ಕಮಿಷನ್ : ಜನರಿಗೆ ಟೋಪಿ ಹಾಕಿ ಯಾಮಾರಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್ – Vishwanews24

ಬೆಂಗಳೂರು : ಗೊರಕೆ ನಿಲ್ಲಿಸುವ ಟೋಪಿ ಮಾರಾಟ ಮಾಡಿದರೆ ಹೆಚ್ಚು ಕಮಿಷನ್ : ಜನರಿಗೆ ಟೋಪಿ ಹಾಕಿ ಯಾಮಾರಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್

ಬೆಂಗಳೂರು : ಗೊರಕೆ ನಿಲ್ಲಿಸುವ ಟೋಪಿಗಳನ್ನು ಮಾರಾಟ ಮಾಡಿದರೆ ಹೆಚ್ಚು ಕಮಿಷನ್ ನೀಡುವುದಾಗಿ ಹೇಳಿ ಜನರಿಗೆ ಟೋಪಿ ಹಾಕಿ ಯಾಮಾರಿಸುತ್ತಿದ್ದ ಗ್ಯಾಂಗ್ ಒಂದು ಅಂದರ್ ಆಗಿದೆ. ಚೈನ್ ಲಿಂಕ್ ಕಂಪನಿಯೊಂದರ ಮುಖ್ಯಸ್ಥ ಸೇರಿದಂತೆ ನಾಲ್ವರನ್ನು ಹೈಗೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಹಾರಾಷ್ಟ್ರದ ಮುಂಬೈ ನಗರದ ಸುನೀಲ್ ಜೋಶಿ, ಬೆಂಗಳೂರಿನ ಶೇಖ್ ಸಾದಿಕ್ ಆಲಿ, ಎನ್.ಯೋಗೇಶ್ ಹಾಗೂ ಪ್ರಮೋದ್ ಗೋಪಿನಾಥ್ ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಖದೀಮರು ತನ್ನ ಏಜೆಂಟ್ಗಳ ಸಭೆ ಕರೆದು ಸಾರ್ವಜನಿಕರಿಂದ ಮಾಗ್ನೆಟಿಕ್ ಅಂಶವಿರುವ ಮ್ಯಾಜಿಕ್ ಟೋಪಿ ಎಂದು. ಸುಳ್ಳು ಪ್ರಚಾರ ನಡೆಸಿ ಕಿಟ್ಗಳನ್ನು ಚೈನ್ ಲಿಂಕ್ ಹೆಸರಿನ ಕಂಪನಿ ಮಾರಾಟ ಮಾಡುತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಕೂಡಲೇ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.ತಲೆಗೆ ಮ್ಯಾಗ್ನೆಟಿಕ್ ಅಂಶವಿರುವ ಟೋಪಿ ಹಾಕಿಕೊಂಡರೆ ನಿದ್ರೆ ಮಾಡುವಾಗ ಗೊರಕೆ ಬರುವುದಿಲ್ಲ. ಸುಖವಾಗಿ ನಿದ್ರೆ ಮಾಡಬಹುದು ಎಂದು ಪ್ರಚಾರ ನಡೆಸಿ 25 ಸಾವಿರಕ್ಕೆ ಮಾರಾಟ ಮಾಡಲಾಗಿದೆ ಎನ್ನಲಾಗಿದೆ.

ಇತ್ತೀಚೆಗೆ ಮಿಲ್ಲರ್ ರಸ್ತೆಯ ಅಂಬೇಡ್ಕರ್ ಭವನದಲ್ಲಿ ಸುಮಾರು ಒಂದು ಸಾವಿರ ಜನರನ್ನು ಸೇರಿಸಿ ಪಿರಾಮಿಡ್ ಚೈನ್ ಲಿಂಕ್ ವ್ಯವಸ್ಥೆಯಲ್ಲಿ ಠೇವಣಿ ಸಂಗ್ರಹಕ್ಕೆ ಬಯೋಟೋರಿಯಂ ಕಂಪನಿ ಮುಂದಾಗಿತ್ತು. ಈ ಕಂಪನಿಗೆ ಹೆಚ್ಚಿನ ಜನರನ್ನು ಸೇರಿಸುತ್ತ ಹೋದರೆ ಅಧಿಕ ಲಾಭ ಬರುತ್ತದೆ ಎಂದು ಆಮಿಷವೊಡ್ಡಿದರು. ಗೊರಕೆ ಟೋಪಿ ಎಂದು ಹೇಳಿ ನಂಬಿಸಿ ಮಾರಾಟ ಮಾಡಿದ್ದ ಟೋಪಿಯ ಬೆಲೆ ಕೇವಲ 300 ರಿಂದ 400 ರುಪಾಯಿ ಇರಬಹುದು. ಅದ ರಲ್ಲಿ ಯಾವುದೇ ಮ್ಯಾಗ್ನೆಟಿಕ್ ಅಂಶ ಇರಲಿಲ್ಲ, ಇದನ್ನು 25 ಸಾವಿರಕ್ಕೆ ಮಾರಾಟಕ್ಕೆ ಯತ್ನಿಸಿದ್ದರು .ಸದ್ಯ ಕಂಪನಿ ಮುಖ್ಯಸ್ಥ ಸುನೀಲ್ ಜೋಶಿ ಬ್ಯಾಂಕ್ ಖಾತೆ ಖಾತೆಯಲ್ಲಿದ್ದ 38 ಲಕ್ಷ ರೂ ಹಣ ಸೀಜ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

16 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

16 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago