Featured

ಬೆಂಗಳೂರು : ಗೊರಕೆ ನಿಲ್ಲಿಸುವ ಟೋಪಿ ಮಾರಾಟ ಮಾಡಿದರೆ ಹೆಚ್ಚು ಕಮಿಷನ್ : ಜನರಿಗೆ ಟೋಪಿ ಹಾಕಿ ಯಾಮಾರಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್ – Vishwanews24

ಬೆಂಗಳೂರು : ಗೊರಕೆ ನಿಲ್ಲಿಸುವ ಟೋಪಿ ಮಾರಾಟ ಮಾಡಿದರೆ ಹೆಚ್ಚು ಕಮಿಷನ್ : ಜನರಿಗೆ ಟೋಪಿ ಹಾಕಿ ಯಾಮಾರಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್

ಬೆಂಗಳೂರು : ಗೊರಕೆ ನಿಲ್ಲಿಸುವ ಟೋಪಿಗಳನ್ನು ಮಾರಾಟ ಮಾಡಿದರೆ ಹೆಚ್ಚು ಕಮಿಷನ್ ನೀಡುವುದಾಗಿ ಹೇಳಿ ಜನರಿಗೆ ಟೋಪಿ ಹಾಕಿ ಯಾಮಾರಿಸುತ್ತಿದ್ದ ಗ್ಯಾಂಗ್ ಒಂದು ಅಂದರ್ ಆಗಿದೆ. ಚೈನ್ ಲಿಂಕ್ ಕಂಪನಿಯೊಂದರ ಮುಖ್ಯಸ್ಥ ಸೇರಿದಂತೆ ನಾಲ್ವರನ್ನು ಹೈಗೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಹಾರಾಷ್ಟ್ರದ ಮುಂಬೈ ನಗರದ ಸುನೀಲ್ ಜೋಶಿ, ಬೆಂಗಳೂರಿನ ಶೇಖ್ ಸಾದಿಕ್ ಆಲಿ, ಎನ್.ಯೋಗೇಶ್ ಹಾಗೂ ಪ್ರಮೋದ್ ಗೋಪಿನಾಥ್ ಎಂದು ಗುರುತಿಸಲಾಗಿದೆ.

ಇತ್ತೀಚೆಗೆ ಖದೀಮರು ತನ್ನ ಏಜೆಂಟ್ಗಳ ಸಭೆ ಕರೆದು ಸಾರ್ವಜನಿಕರಿಂದ ಮಾಗ್ನೆಟಿಕ್ ಅಂಶವಿರುವ ಮ್ಯಾಜಿಕ್ ಟೋಪಿ ಎಂದು. ಸುಳ್ಳು ಪ್ರಚಾರ ನಡೆಸಿ ಕಿಟ್ಗಳನ್ನು ಚೈನ್ ಲಿಂಕ್ ಹೆಸರಿನ ಕಂಪನಿ ಮಾರಾಟ ಮಾಡುತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಕೂಡಲೇ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.ತಲೆಗೆ ಮ್ಯಾಗ್ನೆಟಿಕ್ ಅಂಶವಿರುವ ಟೋಪಿ ಹಾಕಿಕೊಂಡರೆ ನಿದ್ರೆ ಮಾಡುವಾಗ ಗೊರಕೆ ಬರುವುದಿಲ್ಲ. ಸುಖವಾಗಿ ನಿದ್ರೆ ಮಾಡಬಹುದು ಎಂದು ಪ್ರಚಾರ ನಡೆಸಿ 25 ಸಾವಿರಕ್ಕೆ ಮಾರಾಟ ಮಾಡಲಾಗಿದೆ ಎನ್ನಲಾಗಿದೆ.

ಇತ್ತೀಚೆಗೆ ಮಿಲ್ಲರ್ ರಸ್ತೆಯ ಅಂಬೇಡ್ಕರ್ ಭವನದಲ್ಲಿ ಸುಮಾರು ಒಂದು ಸಾವಿರ ಜನರನ್ನು ಸೇರಿಸಿ ಪಿರಾಮಿಡ್ ಚೈನ್ ಲಿಂಕ್ ವ್ಯವಸ್ಥೆಯಲ್ಲಿ ಠೇವಣಿ ಸಂಗ್ರಹಕ್ಕೆ ಬಯೋಟೋರಿಯಂ ಕಂಪನಿ ಮುಂದಾಗಿತ್ತು. ಈ ಕಂಪನಿಗೆ ಹೆಚ್ಚಿನ ಜನರನ್ನು ಸೇರಿಸುತ್ತ ಹೋದರೆ ಅಧಿಕ ಲಾಭ ಬರುತ್ತದೆ ಎಂದು ಆಮಿಷವೊಡ್ಡಿದರು. ಗೊರಕೆ ಟೋಪಿ ಎಂದು ಹೇಳಿ ನಂಬಿಸಿ ಮಾರಾಟ ಮಾಡಿದ್ದ ಟೋಪಿಯ ಬೆಲೆ ಕೇವಲ 300 ರಿಂದ 400 ರುಪಾಯಿ ಇರಬಹುದು. ಅದ ರಲ್ಲಿ ಯಾವುದೇ ಮ್ಯಾಗ್ನೆಟಿಕ್ ಅಂಶ ಇರಲಿಲ್ಲ, ಇದನ್ನು 25 ಸಾವಿರಕ್ಕೆ ಮಾರಾಟಕ್ಕೆ ಯತ್ನಿಸಿದ್ದರು .ಸದ್ಯ ಕಂಪನಿ ಮುಖ್ಯಸ್ಥ ಸುನೀಲ್ ಜೋಶಿ ಬ್ಯಾಂಕ್ ಖಾತೆ ಖಾತೆಯಲ್ಲಿದ್ದ 38 ಲಕ್ಷ ರೂ ಹಣ ಸೀಜ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕೆಎಸ್‌ಟಿಡಿಸಿ ವೀಕೆಂಡ್ ಟೂರ್ ಪ್ಯಾಕೇಜ್, ವಿಶೇಷ ಶೀಘ್ರ ದರ್ಶನ – vishwanews24

ವೀಕೆಂಡ್‌ನಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆಗೆ ಹೋಗುವವರಿಗೆ ಗುಡ್‌ನ್ಯೂಸ್: ವಿಶೇಷ ದರ್ಶನದೊಂದಿಗೆ KSTDC ಹೊಸ ಟೂರ್ ಪ್ಯಾಕೇಜ್ ಬೆಂಗಳೂರು: ಕರಾವಳಿ ಕರ್ನಾಟಕದ…

1 day ago

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ , ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸಾಲವಾಗಿ ನೀಡಿದ್ದ ಹಣ ಮರುಪಾವತಿಯಾಗದೇ ಕಾಲೇಜು ಶುಲ್ಕ ಪಾವತಿಸಲಾಗದೇ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಕಾರವಾರ: ಕಾಲೇಜು ಶುಲ್ಕ ಕಟ್ಟಲು ತಂದೆ…

1 day ago

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ – vishwanews24

ಉಡುಪಿ: ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಉಡುಪಿ: ಪಂಚ ದ್ರಾವಿಡ…

1 day ago

ಜನರ ಕೋಪ ನೋಡಿದರೆ ಮುಂದಿನ ಚುನಾವಣೆಯನ್ನು ನಾವು ಈಗಾಗಲೇ ಗೆದ್ದಿದ್ದೇವೆ: ರಾಹುಲ್ ಗಾಂಧಿ – vishwanews24

ಒಟ್ಟಾಗಿ ನಿಂತು ವಿರೋಧಿಸಿದರೆ ಬಿಜೆಪಿಯನ್ನು ಸೋಲಿಸುವುದು ಸುಲಭ .. ಬಿಜೆಪಿ ನಡೆಸುತ್ತಿರುವ ಪ್ರಚಾರಕ್ಕೆ ಪಕ್ಷದ ನಾಯಕರು ಬಲಿಯಾಗಬಾರದು :ರಾಹುಲ್ ಗಾಂಧಿ…

1 day ago

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ – vishwanews24

ಬೆಂಗಳೂರು ಅಭಿವೃದ್ಧಿ ಖಾತೆ ವಹಿಸಿಕೊಳ್ಳದ ಕೃಷ್ಣ ಬೈರೇಗೌಡ ; ಖಾತೆ ವಿಚಾರಕ್ಕೆ ಸ್ಪಷ್ಟತೆ ಬೇಕು ಎಂದ ಸಚಿವ ಬೆಂಗಳೂರು: ಪ್ರಮಾಣವಚನ…

1 day ago

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20 ರೂ. ಹೆಚ್ಚಳ – vishwanews24

ಪೆಟ್ರೋಲ್, ಗ್ಯಾಸ್‌ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಶಾಕ್ : ಗಗನಕ್ಕೇರಿದ ಅಕ್ಕಿ ಬೆಲೆ ; ಕೆಜಿಗೆ 10 ರಿಂದ 20…

1 day ago