Featured

ಬೆಂಗಳೂರು: ಚಿತ್ರಮಂದಿರದ ಶೌಚಗೃಹದಲ್ಲಿ ಮೊಬೈಲ್ ಇಟ್ಟು ಯುವತಿಯ ವಿಡಿಯೋ ಸೆರೆ: ಇಬ್ಬರು ಅಪ್ರಾಪ್ತ ಬಾಲಕರ ಬಂಧನ – vishwanews24

ಬೆಂಗಳೂರು: ಚಿತ್ರಮಂದಿರದ ಶೌಚಗೃಹದಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋ ಸೆರೆ: ಇಬ್ಬರು ಅಪ್ರಾಪ್ತ ಬಾಲಕರಬಂಧನ

ಬೆಂಗಳೂರು: ಚಿತ್ರಮಂದಿರದ ಶೌಚಗೃಹಕ್ಕೆ ತೆರಳಿದ್ದ ಯುವತಿಯ ವಿಡಿಯೋ ಮಾಡಿದ್ದ ಇಬ್ಬರು 14 ವರ್ಷದ ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ವಿಜಯ್ ಅಭಿನಯದ ಭೀಮ ಚಿತ್ರದ ರಾತ್ರಿ ಪ್ರದರ್ಶನದ ವೇಳೆ ಈ ಘಟನೆ ನಡೆದಿದೆ. ಮಧ್ಯಂತರ ವಿರಾಮದ ವೇಳೆ ಶೌಚಗೃಹ ಬಳಸಲು ಬಂದ 23 ವರ್ಷದ ಯುವತಿ ವಾಶ್‌ರೂಮ್ ನಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋಗಳನ್ನು ರೆಕಾರ್ಡ್ ಮಾಡುವುದನ್ನು ಕಣ್ಣಾರೆ ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.ಸಿನಿಮಾ ಮುಗಿದ ಮೇಲೆ ಚಿತ್ರಮಂದಿರದಿಂದ ಹೊರಬರುತ್ತಿದ್ದ ಪ್ರೇಕ್ಷಕರನ್ನು ಪರೀಕ್ಷಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಹಿಡಿದು ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

23 ವರ್ಷದ ಸಂತ್ರಸ್ತೆ ತನ್ನ ಕುಟುಂಬದೊಂದಿಗೆ ಭೀಮ ಚಿತ್ರವನ್ನು ನೋಡಲು ರಾತ್ರಿ ಶೋಗೆ ಬಂದಿದ್ದಳು. ವಿರಾಮದ ವೇಳೆ ಶೌಚಗೃಹ ಬಳಸಿ ಹೊರಬಂದಾಗ ಇಬ್ಬರು ಹುಡುಗರು ಓಡಿಹೋಗುವುದನ್ನು ನೋಡಿದಳು. ತಕ್ಷಣ ಈ ವಿಷಯವನ್ನು ಥಿಯೇಟರ್ ಸಿಬ್ಬಂದಿಯ ಗಮನಕ್ಕೆ ತಂದರು. ನಂತರ ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ (ERSS) ಸಂಖ್ಯೆ 112 ಗೆ ಕರೆ ಮಾಡಿ ದೂರು ನೀಡಿದ್ದರು. ಇಬ್ಬರೂ ಬಾಲಕರು ಜಯನಗರ 1ನೇ ಬ್ಲಾಕ್ ನಿವಾಸಿಗಳು. ವಾಶ್ ರೂಂನಲ್ಲಿ ಮಹಿಳೆಯರನ್ನು ಚಿತ್ರೀಕರಿಸಲು ಬಳಸಲಾಗಿದ್ದ ಮೊಬೈಲ್ ಒಂದನ್ನು ವಶಪಡಿಸಿಕೊಂಡು ಪರಿಶೀಲನೆಗೆ ಕಳುಹಿಸಿದ್ದಾರೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಕಳೆದ ಆರು ದಿನಗಳಲ್ಲಿ ಇದೇ ರೀತಿಯ ಎರಡನೇ ಘಟನೆಯಾಗಿದೆ. ಮಹಿಳೆಯರ ವಾಶ್ ರೂಂನಲ್ಲಿ ಮೊಬೈಲ್ ಇಟ್ಟಿದ್ದಕ್ಕಾಗಿ ಬಿಇಎಲ್ ರಸ್ತೆಯ ಥರ್ಡ್ ವೇವ್ ಕಾಫಿ ಉದ್ಯೋಗಿ 23 ವರ್ಷದ ಮನೋಜ್ ಎಂಬಾತನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago