Featured

ಬೆಂಗಳೂರು: ಚಿತ್ರಮಂದಿರದ ಶೌಚಗೃಹದಲ್ಲಿ ಮೊಬೈಲ್ ಇಟ್ಟು ಯುವತಿಯ ವಿಡಿಯೋ ಸೆರೆ: ಇಬ್ಬರು ಅಪ್ರಾಪ್ತ ಬಾಲಕರ ಬಂಧನ – vishwanews24

ಬೆಂಗಳೂರು: ಚಿತ್ರಮಂದಿರದ ಶೌಚಗೃಹದಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋ ಸೆರೆ: ಇಬ್ಬರು ಅಪ್ರಾಪ್ತ ಬಾಲಕರಬಂಧನ

ಬೆಂಗಳೂರು: ಚಿತ್ರಮಂದಿರದ ಶೌಚಗೃಹಕ್ಕೆ ತೆರಳಿದ್ದ ಯುವತಿಯ ವಿಡಿಯೋ ಮಾಡಿದ್ದ ಇಬ್ಬರು 14 ವರ್ಷದ ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ವಿಜಯ್ ಅಭಿನಯದ ಭೀಮ ಚಿತ್ರದ ರಾತ್ರಿ ಪ್ರದರ್ಶನದ ವೇಳೆ ಈ ಘಟನೆ ನಡೆದಿದೆ. ಮಧ್ಯಂತರ ವಿರಾಮದ ವೇಳೆ ಶೌಚಗೃಹ ಬಳಸಲು ಬಂದ 23 ವರ್ಷದ ಯುವತಿ ವಾಶ್‌ರೂಮ್ ನಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋಗಳನ್ನು ರೆಕಾರ್ಡ್ ಮಾಡುವುದನ್ನು ಕಣ್ಣಾರೆ ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.ಸಿನಿಮಾ ಮುಗಿದ ಮೇಲೆ ಚಿತ್ರಮಂದಿರದಿಂದ ಹೊರಬರುತ್ತಿದ್ದ ಪ್ರೇಕ್ಷಕರನ್ನು ಪರೀಕ್ಷಿಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಹಿಡಿದು ಕಲಾಸಿಪಾಳ್ಯ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

23 ವರ್ಷದ ಸಂತ್ರಸ್ತೆ ತನ್ನ ಕುಟುಂಬದೊಂದಿಗೆ ಭೀಮ ಚಿತ್ರವನ್ನು ನೋಡಲು ರಾತ್ರಿ ಶೋಗೆ ಬಂದಿದ್ದಳು. ವಿರಾಮದ ವೇಳೆ ಶೌಚಗೃಹ ಬಳಸಿ ಹೊರಬಂದಾಗ ಇಬ್ಬರು ಹುಡುಗರು ಓಡಿಹೋಗುವುದನ್ನು ನೋಡಿದಳು. ತಕ್ಷಣ ಈ ವಿಷಯವನ್ನು ಥಿಯೇಟರ್ ಸಿಬ್ಬಂದಿಯ ಗಮನಕ್ಕೆ ತಂದರು. ನಂತರ ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ (ERSS) ಸಂಖ್ಯೆ 112 ಗೆ ಕರೆ ಮಾಡಿ ದೂರು ನೀಡಿದ್ದರು. ಇಬ್ಬರೂ ಬಾಲಕರು ಜಯನಗರ 1ನೇ ಬ್ಲಾಕ್ ನಿವಾಸಿಗಳು. ವಾಶ್ ರೂಂನಲ್ಲಿ ಮಹಿಳೆಯರನ್ನು ಚಿತ್ರೀಕರಿಸಲು ಬಳಸಲಾಗಿದ್ದ ಮೊಬೈಲ್ ಒಂದನ್ನು ವಶಪಡಿಸಿಕೊಂಡು ಪರಿಶೀಲನೆಗೆ ಕಳುಹಿಸಿದ್ದಾರೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಕಳೆದ ಆರು ದಿನಗಳಲ್ಲಿ ಇದೇ ರೀತಿಯ ಎರಡನೇ ಘಟನೆಯಾಗಿದೆ. ಮಹಿಳೆಯರ ವಾಶ್ ರೂಂನಲ್ಲಿ ಮೊಬೈಲ್ ಇಟ್ಟಿದ್ದಕ್ಕಾಗಿ ಬಿಇಎಲ್ ರಸ್ತೆಯ ಥರ್ಡ್ ವೇವ್ ಕಾಫಿ ಉದ್ಯೋಗಿ 23 ವರ್ಷದ ಮನೋಜ್ ಎಂಬಾತನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದರು.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

41 minutes ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

2 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

2 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

2 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

3 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

3 hours ago