Featured

ಬೆಂಗಳೂರು : ಟೆಕ್ಕಿ ಅತುಲ್​ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ ಸಹಿತ ಮೂವರ ಬಂಧನ – vishwanews24

ಬೆಂಗಳೂರು : ಟೆಕ್ಕಿ ಅತುಲ್​ ಸುಭಾಷ್ ಆತ್ಮಹತ್ಯೆ ಪ್ರಕರಣ: ಪತ್ನಿ, ಅತ್ತೆ, ಬಾಮೈದಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : ಉತ್ತರ ಪ್ರದೇಶ  ಮೂಲದ ಟೆಕ್ಕಿ ಅತುಲ್ ಸುಭಾಷ್  ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅತುಲ್ ಪತ್ನಿ, ಎ1 ನಿಖಿತಾ ಸಿಂಘಾನಿಯ, ಆತುಲ್​ ಅತ್ತೆ, ಎ2 ನಿಶಾ ಸಿಂಘಾನಿಯಾ, ಭಾಮೈದ ಎ3 ಅನುರಾಗ್​ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ  ಕರೆತಂದಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅಲಹಾಬಾದ್​ನಲ್ಲಿ ನಿಶಾ ಹಾಗೂ ಅನುರಾಗ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೂವರನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪತಿ ಆತ್ಮಹತ್ಯೆ ಬಳಿಕ ನಿಖಿತಾ ಪರಾರಿಯಾಗಿದ್ದರು. ಹುಡುಕಾಟ ಆರಂಭಿಸಿದ್ದ ಮಾರತ್ತಹಳ್ಳಿ ಪೊಲೀಸರು ಮೂರು ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದರು.

ಏನಿದು ಪ್ರಕರಣ
ಪತ್ನಿ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಅತುಲ್ ಸುಭಾಷ (34 ವರ್ಷ) ಡೆತ್​ನೋಟ್​ ಬರೆದಿಟ್ಟು ಡಿಸೆಂಬರ್​ 9ರಂದು ಬೆಂಗಳೂರಿನ ಮಂಜುನಾಥ ಲೇಔಟ್​ನ ಪ್ಲಾಟ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ತನಗೆ ಪತ್ನಿ ಮತ್ತು ಆಕೆಯ ಸಂಬಂಧಿಕರು ನೀಡಿರುವ ಕಿರುಕುಳದ ಬಗ್ಗೆ 90 ನಿಮಿಷಗಳ ವಿಡಿಯೋ ಮಾಡಿ, ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಹರಿಬಿಟ್ಟಿದ್ದಾರೆ. ಮಾರತ್ತಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತುಲ್ ಸುಭಾಷ ಆತ್ಮಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಅಲ್ಲದೇ ಪ್ರಕರಣ ಸುಪ್ರೀಂ ಕೋರ್ಟ್​ನಲ್ಲೂ ಪ್ರಸ್ತಾಪವಾಗಿತ್ತು.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

1 hour ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

2 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

15 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

21 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

22 hours ago