ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ತಂದೆ, ತಾಯಿಯನ್ನು ಹತ್ಯೆಗೈದ ಆರೋಪದ ಮೇಲೆ ಮಗನನ್ನು ಹೆಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಂದೆ ನವೀನ್ ಚಂದ್ರ ಭಟ್ (60) ಹಾಗೂ ತಾಯಿ ಡಾ.ಶ್ಯಾಮಲಾ ಭಟ್ (55) ಅವರನ್ನು ಕೊಲೆಯಾದವರು. ಇವರನ್ನು ಹತ್ಯೆ ಮಾಡಿದ ಆರೋಪದಡಿ ಟೆಕ್ಕಿ ರೋಹನ್ ಚಂದ್ರ ಭಟ್ (33) ಎಂಬವನನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೆಚ್ಎಎಲ್ನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಪ್ಲ್ಯಾಟ್ನಲ್ಲಿ ಕೊಲೆ ನಡೆದಿದೆ. ನವೀನ್ ಚಂದ್ರ ಅವರು ನೌಕಾ ಸೇನೆಯ ನಿವೃತ್ತ ಕ್ಯಾಪ್ಟನ್ ಆಗಿದ್ದರೆ, ಶ್ಯಾಮಲಾ ಅವರು ದಂತ ವೈದ್ಯೆಯಾಗಿದ್ದರು.
ಇದನ್ನೂ ಓದಿ:
ಕೌಟುಂಬಿಕ ಕಲಹದ ಕಾರಣ ಬುಧವಾರ ಬೆಳಗ್ಗೆ 7.30ರ ಸುಮಾರಿಗೆ ರೋಹನ್ ತನ್ನ ಪೋಷಕರಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ಗಾಯಗೊಂಡ ಇಬ್ಬರನ್ನೂ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಸ್ಪತ್ರೆಯ ವೈದ್ಯೆ ಡಾ.ಮಾಧವಿ ನಾಯರ್ ನೀಡಿದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರ ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತರ ಮಗಳು ಯುಎಸ್ ಎನಲ್ಲಿದ್ದು, ಅವರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಕೃತ್ಯ ಎಸಗಿರುವ ಆರೋಪಿಯನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…