ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಇರಿದು ತಂದೆ, ತಾಯಿಯನ್ನು ಹತ್ಯೆಗೈದ ಆರೋಪದ ಮೇಲೆ ಮಗನನ್ನು ಹೆಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಂದೆ ನವೀನ್ ಚಂದ್ರ ಭಟ್ (60) ಹಾಗೂ ತಾಯಿ ಡಾ.ಶ್ಯಾಮಲಾ ಭಟ್ (55) ಅವರನ್ನು ಕೊಲೆಯಾದವರು. ಇವರನ್ನು ಹತ್ಯೆ ಮಾಡಿದ ಆರೋಪದಡಿ ಟೆಕ್ಕಿ ರೋಹನ್ ಚಂದ್ರ ಭಟ್ (33) ಎಂಬವನನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೆಚ್ಎಎಲ್ನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಪ್ಲ್ಯಾಟ್ನಲ್ಲಿ ಕೊಲೆ ನಡೆದಿದೆ. ನವೀನ್ ಚಂದ್ರ ಅವರು ನೌಕಾ ಸೇನೆಯ ನಿವೃತ್ತ ಕ್ಯಾಪ್ಟನ್ ಆಗಿದ್ದರೆ, ಶ್ಯಾಮಲಾ ಅವರು ದಂತ ವೈದ್ಯೆಯಾಗಿದ್ದರು.
ಇದನ್ನೂ ಓದಿ:
ಕೌಟುಂಬಿಕ ಕಲಹದ ಕಾರಣ ಬುಧವಾರ ಬೆಳಗ್ಗೆ 7.30ರ ಸುಮಾರಿಗೆ ರೋಹನ್ ತನ್ನ ಪೋಷಕರಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ಗಾಯಗೊಂಡ ಇಬ್ಬರನ್ನೂ ಚಿಕಿತ್ಸೆಗೆಂದು ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಸ್ಪತ್ರೆಯ ವೈದ್ಯೆ ಡಾ.ಮಾಧವಿ ನಾಯರ್ ನೀಡಿದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರ ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತರ ಮಗಳು ಯುಎಸ್ ಎನಲ್ಲಿದ್ದು, ಅವರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಕೃತ್ಯ ಎಸಗಿರುವ ಆರೋಪಿಯನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…