ನವದೆಹಲಿ: ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಿಂದ ಹೊರಟ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಬೆಂಗಳೂರು, ದೆಹಲಿ ಸೇರಿದಂತೆ ದೇಶದ ವಿವಿಧ ಮಹಾನಗರಗಳಿಗೆ ತಲುಪಿದೆ.
ಇಂದು ಬೆಳಗ್ಗೆ 8 ಗಂಟೆಗೆ ಪುಣೆ ವಿಮಾನ ನಿಲ್ದಾಣದಿಂದ ಹೊರಟ ಸ್ಪೈಸ್ ಜೆಟ್ ವಿಮಾನ ಲಸಿಕೆಯನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ 10 ಗಂಟೆ ಹೊತ್ತಿಗೆ ಬಂದಿಳಿಯಿತು. ಸೆರಂ ಇನ್ಸ್ ಟಿಟ್ಯೂಟ್ ಪುಣೆ ವಿಮಾನ ನಿಲ್ದಾಣದಿಂದ 15 ಕಿಲೋ ಮೀಟರ್ ದೂರದಲ್ಲಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ 11.45ರ ಸುಮಾರಿಗೆ ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಹೋರಾಡುವ ಬ್ರಹ್ಮಾಸ್ತ್ರ ಲಸಿಕೆ ಬಂದಿಳಿದಿದ್ದು, ಅಲ್ಲಿಂದ ವ್ಯಾಕ್ಸಿನ್ ಕೇಂದ್ರಗಳಿಗೆ ರವಾನೆಯಾಗಲಿದೆ.
ಇಂದು 56.5 ಲಕ್ಷ ಡೋಸ್ ಕೋವಿಡ್-19 ಲಸಿಕೆಯನ್ನು ಪುಣೆಯಿಂದ 13 ಮಹಾನಗರಗಳಿಗೆ ತಲುಪಿಸಲು ನಾಲ್ಕು ವಿಮಾನ ಯಾನ ಸಂಸ್ಥೆಗಳ 9 ವಿಮಾನಗಳಲ್ಲಿ ಸಾಗಿಸಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಮೂರು ತಾಪಮಾನ ನಿಯಂತ್ರಣ ಟ್ರಕ್ ಗಳು ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಸೆರಂ ಇನ್ಸ್ ಟಿಟ್ಯೂಟ್ ನಿಂದ ವಿಮಾನ ನಿಲ್ದಾಣ ಕಡೆಗೆ ಹೊರಟಿತು. ಲಸಿಕೆಯನ್ನು ವಾಹನಕ್ಕೆ ಹಾಕಿ ಹೊರಡುವ ಮೊದಲು ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಲಾಯಿತು.
ಕೋವಿಶೀಲ್ಡ್ ಲಸಿಕೆಯನ್ನು ಆಕ್ಸ್ ಫರ್ಡ್ ವಿಶ್ವ ವಿದ್ಯಾಲಯ ಮತ್ತು ಬ್ರಿಟನ್-ಸ್ವೀಡನ್ ಮೂಲದ ಕಂಪೆನಿ ಅಸ್ಟ್ರಾಝೆನೆಕಾ ಅಭಿವೃದ್ಧಿಪಡಿಸಿದ್ದು ಸೆರಂ ಇನ್ಸ್ ಟಿಟ್ಯೂಟ್ ಉತ್ಪಾದನೆ ಮಾಡಿದೆ.
ಗುಜರಾತ್ ನ ಅಹ್ಮದಾಬಾದ್ ನ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಹ ಕೆಲ ಹೊತ್ತಿನ ಮೊದಲು ಕೋವಿಡ್ ಲಸಿಕೆ ಬಾಕ್ಸ್ ಗಳಲ್ಲಿ ಬಂದಿಳಿಯಿತು.
ಇದೇ 16ರಿಂದ ಕೋವಿಡ್-19 ಲಸಿಕಾ ಅಭಿಯಾನ ದೇಶಾದ್ಯಂತ ಆರಂಭವಾಗುತ್ತಿದ್ದು, ಆರಂಭದಲ್ಲಿ ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗೆ ನೀಡಲಾಗುತ್ತದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…