Featured

ಬೆಂಗಳೂರು ತಲುಪಿದ ಕೋವಿಡ್-19 ಲಸಿಕೆ -Vishwanews24

ಬೆಂಗಳೂರು, ದೆಹಲಿ ಸೇರಿದಂತೆ ವಿವಿಧ ಮಹಾನಗರ ತಲುಪಿದ ಕೋವಿಡ್-19 ಲಸಿಕೆ –Vishwanews24

ನವದೆಹಲಿ: ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ನಿಂದ ಹೊರಟ ಕೋವಿಶೀಲ್ಡ್ ಕೋವಿಡ್-19 ಲಸಿಕೆ ಬೆಂಗಳೂರು, ದೆಹಲಿ ಸೇರಿದಂತೆ ದೇಶದ ವಿವಿಧ ಮಹಾನಗರಗಳಿಗೆ ತಲುಪಿದೆ.

ಇಂದು ಬೆಳಗ್ಗೆ 8 ಗಂಟೆಗೆ ಪುಣೆ ವಿಮಾನ ನಿಲ್ದಾಣದಿಂದ ಹೊರಟ ಸ್ಪೈಸ್ ಜೆಟ್ ವಿಮಾನ ಲಸಿಕೆಯನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ 10 ಗಂಟೆ ಹೊತ್ತಿಗೆ ಬಂದಿಳಿಯಿತು. ಸೆರಂ ಇನ್ಸ್ ಟಿಟ್ಯೂಟ್ ಪುಣೆ ವಿಮಾನ ನಿಲ್ದಾಣದಿಂದ 15 ಕಿಲೋ ಮೀಟರ್ ದೂರದಲ್ಲಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ 11.45ರ ಸುಮಾರಿಗೆ ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಹೋರಾಡುವ ಬ್ರಹ್ಮಾಸ್ತ್ರ ಲಸಿಕೆ ಬಂದಿಳಿದಿದ್ದು, ಅಲ್ಲಿಂದ ವ್ಯಾಕ್ಸಿನ್ ಕೇಂದ್ರಗಳಿಗೆ ರವಾನೆಯಾಗಲಿದೆ.

ಇಂದು 56.5 ಲಕ್ಷ ಡೋಸ್ ಕೋವಿಡ್-19 ಲಸಿಕೆಯನ್ನು ಪುಣೆಯಿಂದ 13 ಮಹಾನಗರಗಳಿಗೆ ತಲುಪಿಸಲು ನಾಲ್ಕು ವಿಮಾನ ಯಾನ ಸಂಸ್ಥೆಗಳ 9 ವಿಮಾನಗಳಲ್ಲಿ ಸಾಗಿಸಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಮೂರು ತಾಪಮಾನ ನಿಯಂತ್ರಣ ಟ್ರಕ್ ಗಳು ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಸೆರಂ ಇನ್ಸ್ ಟಿಟ್ಯೂಟ್ ನಿಂದ ವಿಮಾನ ನಿಲ್ದಾಣ ಕಡೆಗೆ ಹೊರಟಿತು. ಲಸಿಕೆಯನ್ನು ವಾಹನಕ್ಕೆ ಹಾಕಿ ಹೊರಡುವ ಮೊದಲು ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಲಾಯಿತು.

ಕೋವಿಶೀಲ್ಡ್ ಲಸಿಕೆಯನ್ನು ಆಕ್ಸ್ ಫರ್ಡ್ ವಿಶ್ವ ವಿದ್ಯಾಲಯ ಮತ್ತು ಬ್ರಿಟನ್-ಸ್ವೀಡನ್ ಮೂಲದ ಕಂಪೆನಿ ಅಸ್ಟ್ರಾಝೆನೆಕಾ ಅಭಿವೃದ್ಧಿಪಡಿಸಿದ್ದು ಸೆರಂ ಇನ್ಸ್ ಟಿಟ್ಯೂಟ್ ಉತ್ಪಾದನೆ ಮಾಡಿದೆ.

ಗುಜರಾತ್ ನ ಅಹ್ಮದಾಬಾದ್ ನ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಹ ಕೆಲ ಹೊತ್ತಿನ ಮೊದಲು ಕೋವಿಡ್ ಲಸಿಕೆ ಬಾಕ್ಸ್ ಗಳಲ್ಲಿ ಬಂದಿಳಿಯಿತು.

ಇದೇ 16ರಿಂದ ಕೋವಿಡ್-19 ಲಸಿಕಾ ಅಭಿಯಾನ ದೇಶಾದ್ಯಂತ ಆರಂಭವಾಗುತ್ತಿದ್ದು, ಆರಂಭದಲ್ಲಿ ಕೋವಿಡ್-19 ಮುಂಚೂಣಿ ಕಾರ್ಯಕರ್ತರಿಗೆ ನೀಡಲಾಗುತ್ತದೆ.

http://ನಗರ ನಕ್ಸಲರು ರೈತರ ಹೆಸರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ : ಶೋಭಾ ಕರಂದ್ಲಾಜೆ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

10 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago