ಬೆಂಗಳೂರು ದಕ್ಷಿಣ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕಿಯರಿಂದ ‘ಅಲ್ಲಾಡ್ಸು-ಅಲ್ಲಾಡ್ಸು’ ಡ್ಯಾನ್ಸ್ : ಶಿಕ್ಷಣ ಸಚಿವರಿಂದ ಶಾಲೆಗೆ ನೋಟೀಸ್ -Vishwanews24

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ‘ಅಲ್ಲಾಡ್ಸು-ಅಲ್ಲಾಡ್ಸು’ ಹಾಡೊಂದಕ್ಕೆ ಶಿಕ್ಷಕಿಯರ ತಂಡ ವೇದಿಕೆಯಲ್ಲಿ ಹೆಜ್ಜೆ ಹಾಕಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ವೈರಲ್ ಆಗಿದ್ದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಘಟನೆಯ ಕುರಿತು ಶಾಲೆಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಸರ್ಕಾರಿ ಶಾಲೆಯ ವೇದಿಕೆಯಲ್ಲಿ ಶಿಕ್ಷಕಿಯರು ಡಾನ್ಸ್ ಹೆಜ್ಜೆ ಹಾಕಿರುವುದನ್ನು ‘ಅಸಭ್ಯ’ ನೃತ್ಯ ಎಂದು ಪರಿಗಣಿಸಿ ಈ ನೋಟೀಸ್ ನೀಡಲಾಗಿದೆ.

“ಶಿಕ್ಷಕ ವೃತ್ತಿಗೆ ತರವಲ್ಲದ ರೀತಿಯಲ್ಲಿ ನೃತ್ಯ ಮಾಡಿರುವ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಇದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಮಾಂಜನೇಯ ರಸ್ತೆ ಹನುಮಂತನಗರ ಎಂದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ರೀತಿಯ ನೃತ್ಯಗಳು ಶೈಕ್ಷಣಿಕ ಮಾನಸಿಕ ಹಾಗೂ ಬೌದ್ದಿಕತೆ ಮೇಲೆ ದುಷ್ಪರಿಣಾಮ ಬೀರುತ್ತದೆ.

“ಜವಬ್ದಾರಿಯುತ ಮತ್ತು ಸಮಾಜದಲ್ಲಿ ಗೌರವಯುತ ಹುದ್ದೆಯಲ್ಲಿರುವ ಶಿಕ್ಷಕರು ಈ ರೀತಿ ವರ್ತಿಸಿರುವುದು, ಹಾಗೂ ಅನುಮತಿ ನೀಡಿರುವುದು ನಿಯಮಕ್ಕೆ ವಿರುದ್ದವಾಗಿದೆ. ಇದು ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಸರಿಯಾದ ಕ್ರಮವಲ್ಲ. ಕರ್ತವ್ಯ ಲೋಪ ಹಾಗೂ ಇಲಾಖೆಯ ಗೌರವಕ್ಕೆ ಧಕ್ಕೆ ತಂದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ನಿಮ್ಮ ಮೇಲೆ ಶಿಸ್ತು ಕ್ರಮ ಜರಗಿಸಬಾರದೇಕೆ ಎಂದು ಲಿಖಿತ ಸಮಜಾಯಿಷಿ ನೀಡಲು ಸೂಚಿಸಿದೆ” ಎಂದು ನೋಟೀಸ್ ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚೆಗೆ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಪಕ್ಕೆಲುಬು ಉಚ್ಚರಿಸುವಂತೆ ಹೇಳಿ ಥಳಿಸಿದ ವಿಡಿಯೋ ಒಂದು ವೈರಲ್ ಆಗಿತ್ತು. ಶಿಕ್ಷಕರ ನಡೆಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ ಶಿಕ್ಷಕರನ್ನು ಸಚಿವ ಸುರೇಶ್ ಕುಮಾರ್ ಸೂಚನೆಯಂತೆ ಅಮಾನತು ಮಾಡಲಾಗಿತ್ತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

1 hour ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago