ಬೆಂಗಳೂರು: ನಕಲಿ ಗೋಲ್ಡ್​​ ಲೋನ್​​ ಸೃಷ್ಟಿಸಿ ಕೋಟಿ ಕೋಟಿ ವಂಚನೆ;  ಬ್ಯಾಂಕ್​ ಮ್ಯಾನೇಜರ್ ವಿರುದ್ಧ FIR ದಾಖಲು- vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು:  ನಕಲಿ ಗೋಲ್ಡ್​​ ಲೋನ್​​ ಸೃಷ್ಟಿಸಿ ಕೋಟಿ ಕೋಟಿ ವಂಚನೆ;  ಬ್ಯಾಂಕ್​ಮ್ಯಾನೇಜರ್ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬ್ಯಾಂಕ್​ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿದ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

3 ಕೋಟಿ ರೂ.ಗೂ ಹೆಚ್ಚು ವಂಚನೆ
ಮಲ್ಲೇಶ್ವರಂನ 15ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿ ಕೋಟಿ ಕೋಟಿ ರೂ. ಹಣ ಲೂಟಿ ಮಾಡಿರುವ ಆರೋಪ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಕೇಳಿಬಂದಿದೆ. 2025ರ ಅಕ್ಟೋಬರ್ 4ರಿಂದ ಡಿಸೆಂಬರ್ 9ರವರೆಗೆ ಒಟ್ಟು 41 ಗ್ರಾಹಕರ ಖಾತೆಗಳಲ್ಲಿ ಚಿನ್ನವೇ ಇರದೆ ನಕಲಿ ಗೋಲ್ಡ್ ಲೋನ್‌ಗಳನ್ನು ಓಪನ್ ಮಾಡಿ, ಸುಮಾರು 3.11 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.

ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ : ಡಿ.ಕೆ.ಶಿ – vishwanews24

ವಯೋವೃದ್ಧರು, ಪಿಂಚಣಿದಾರರು, ಅರ್ಚಕರು ಹಾಗೂ ಹೋಲ್‌ಸೇಲ್ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿದ ಆರೋಪವಿದ್ದು, ಬ್ಯಾಂಕ್ ಕೆಲಸಕ್ಕೆ ಅಗತ್ಯವೆಂದು ಸುಳ್ಳು ಹೇಳಿ ಅವರಿಂದ ಒಟಿಪಿ ಮತ್ತು ಚೆಕ್ ಪಡೆದು ನಂಬಿಕೆ ದ್ರೋಹ ಮಾಡಲಾಗಿದೆ. ಗ್ರಾಹಕರಿಗೆ ತಿಳಿಯದೇ ಅವರ ಖಾತೆಗಳಲ್ಲಿ ಗೋಲ್ಡ್ ಲೋನ್ ತೆರೆದು ಹಣವನ್ನು ಡ್ರಾ ಮಾಡಿ ತನ್ನ ಖಾತೆಗೆ ವರ್ಗಾಯಿಸಿಕೊಂಡು ಎಸ್ಕೇಪ್ ಆಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಗ್ರಾಹಕರು ಎಚ್ಚರದಿಂದಿರುವಂತೆ ಸೂಚನೆ
ಈಗಾಗಲೇ ಕೆನರಾ ಬ್ಯಾಂಕ್ 41 ಖಾತೆಗಳನ್ನು ಫ್ರೀಜ್ ಮಾಡಿದ್ದು, ಯಾವುದೇ ಚಿನ್ನವಿಲ್ಲದೇ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಘಟನೆಯ ನಂತರ ತಮ್ಮ ಖಾತೆಗಳಲ್ಲಿ ಯಾವುದೇ ಅನುಮಾನಾಸ್ಪದ ಲೋನ್ ಇದೆಯೇ ಎಂಬುದನ್ನು ತಕ್ಷಣ ಪರಿಶೀಲಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ.

ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ : ಡಿ.ಕೆ.ಶಿ – vishwanews24

Leave a Reply