ಬೆಂಗಳೂರು: ಬೆಂಗಳೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬ್ಯಾಂಕ್ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್ಗಳನ್ನು ಸೃಷ್ಟಿಸಿದ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
3 ಕೋಟಿ ರೂ.ಗೂ ಹೆಚ್ಚು ವಂಚನೆ
ಮಲ್ಲೇಶ್ವರಂನ 15ನೇ ಕ್ರಾಸ್ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಕಲಿ ಗೋಲ್ಡ್ ಲೋನ್ಗಳನ್ನು ಸೃಷ್ಟಿಸಿ ಕೋಟಿ ಕೋಟಿ ರೂ. ಹಣ ಲೂಟಿ ಮಾಡಿರುವ ಆರೋಪ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಕೇಳಿಬಂದಿದೆ. 2025ರ ಅಕ್ಟೋಬರ್ 4ರಿಂದ ಡಿಸೆಂಬರ್ 9ರವರೆಗೆ ಒಟ್ಟು 41 ಗ್ರಾಹಕರ ಖಾತೆಗಳಲ್ಲಿ ಚಿನ್ನವೇ ಇರದೆ ನಕಲಿ ಗೋಲ್ಡ್ ಲೋನ್ಗಳನ್ನು ಓಪನ್ ಮಾಡಿ, ಸುಮಾರು 3.11 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.
ವಯೋವೃದ್ಧರು, ಪಿಂಚಣಿದಾರರು, ಅರ್ಚಕರು ಹಾಗೂ ಹೋಲ್ಸೇಲ್ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿದ ಆರೋಪವಿದ್ದು, ಬ್ಯಾಂಕ್ ಕೆಲಸಕ್ಕೆ ಅಗತ್ಯವೆಂದು ಸುಳ್ಳು ಹೇಳಿ ಅವರಿಂದ ಒಟಿಪಿ ಮತ್ತು ಚೆಕ್ ಪಡೆದು ನಂಬಿಕೆ ದ್ರೋಹ ಮಾಡಲಾಗಿದೆ. ಗ್ರಾಹಕರಿಗೆ ತಿಳಿಯದೇ ಅವರ ಖಾತೆಗಳಲ್ಲಿ ಗೋಲ್ಡ್ ಲೋನ್ ತೆರೆದು ಹಣವನ್ನು ಡ್ರಾ ಮಾಡಿ ತನ್ನ ಖಾತೆಗೆ ವರ್ಗಾಯಿಸಿಕೊಂಡು ಎಸ್ಕೇಪ್ ಆಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಗ್ರಾಹಕರು ಎಚ್ಚರದಿಂದಿರುವಂತೆ ಸೂಚನೆ
ಈಗಾಗಲೇ ಕೆನರಾ ಬ್ಯಾಂಕ್ 41 ಖಾತೆಗಳನ್ನು ಫ್ರೀಜ್ ಮಾಡಿದ್ದು, ಯಾವುದೇ ಚಿನ್ನವಿಲ್ಲದೇ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಘಟನೆಯ ನಂತರ ತಮ್ಮ ಖಾತೆಗಳಲ್ಲಿ ಯಾವುದೇ ಅನುಮಾನಾಸ್ಪದ ಲೋನ್ ಇದೆಯೇ ಎಂಬುದನ್ನು ತಕ್ಷಣ ಪರಿಶೀಲಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…