Featured

ಬೆಂಗಳೂರು: ನಕಲಿ ಗೋಲ್ಡ್​​ ಲೋನ್​​ ಸೃಷ್ಟಿಸಿ ಕೋಟಿ ಕೋಟಿ ವಂಚನೆ;  ಬ್ಯಾಂಕ್​ ಮ್ಯಾನೇಜರ್ ವಿರುದ್ಧ FIR ದಾಖಲು- vishwanews24

ಬೆಂಗಳೂರು:  ನಕಲಿ ಗೋಲ್ಡ್​​ ಲೋನ್​​ ಸೃಷ್ಟಿಸಿ ಕೋಟಿ ಕೋಟಿ ವಂಚನೆ;  ಬ್ಯಾಂಕ್​ಮ್ಯಾನೇಜರ್ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬ್ಯಾಂಕ್​ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿದ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

3 ಕೋಟಿ ರೂ.ಗೂ ಹೆಚ್ಚು ವಂಚನೆ
ಮಲ್ಲೇಶ್ವರಂನ 15ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿ ಕೋಟಿ ಕೋಟಿ ರೂ. ಹಣ ಲೂಟಿ ಮಾಡಿರುವ ಆರೋಪ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಕೇಳಿಬಂದಿದೆ. 2025ರ ಅಕ್ಟೋಬರ್ 4ರಿಂದ ಡಿಸೆಂಬರ್ 9ರವರೆಗೆ ಒಟ್ಟು 41 ಗ್ರಾಹಕರ ಖಾತೆಗಳಲ್ಲಿ ಚಿನ್ನವೇ ಇರದೆ ನಕಲಿ ಗೋಲ್ಡ್ ಲೋನ್‌ಗಳನ್ನು ಓಪನ್ ಮಾಡಿ, ಸುಮಾರು 3.11 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.

ವಯೋವೃದ್ಧರು, ಪಿಂಚಣಿದಾರರು, ಅರ್ಚಕರು ಹಾಗೂ ಹೋಲ್‌ಸೇಲ್ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿದ ಆರೋಪವಿದ್ದು, ಬ್ಯಾಂಕ್ ಕೆಲಸಕ್ಕೆ ಅಗತ್ಯವೆಂದು ಸುಳ್ಳು ಹೇಳಿ ಅವರಿಂದ ಒಟಿಪಿ ಮತ್ತು ಚೆಕ್ ಪಡೆದು ನಂಬಿಕೆ ದ್ರೋಹ ಮಾಡಲಾಗಿದೆ. ಗ್ರಾಹಕರಿಗೆ ತಿಳಿಯದೇ ಅವರ ಖಾತೆಗಳಲ್ಲಿ ಗೋಲ್ಡ್ ಲೋನ್ ತೆರೆದು ಹಣವನ್ನು ಡ್ರಾ ಮಾಡಿ ತನ್ನ ಖಾತೆಗೆ ವರ್ಗಾಯಿಸಿಕೊಂಡು ಎಸ್ಕೇಪ್ ಆಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಗ್ರಾಹಕರು ಎಚ್ಚರದಿಂದಿರುವಂತೆ ಸೂಚನೆ
ಈಗಾಗಲೇ ಕೆನರಾ ಬ್ಯಾಂಕ್ 41 ಖಾತೆಗಳನ್ನು ಫ್ರೀಜ್ ಮಾಡಿದ್ದು, ಯಾವುದೇ ಚಿನ್ನವಿಲ್ಲದೇ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಘಟನೆಯ ನಂತರ ತಮ್ಮ ಖಾತೆಗಳಲ್ಲಿ ಯಾವುದೇ ಅನುಮಾನಾಸ್ಪದ ಲೋನ್ ಇದೆಯೇ ಎಂಬುದನ್ನು ತಕ್ಷಣ ಪರಿಶೀಲಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

16 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

16 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

19 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

19 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

19 hours ago