Featured

ಬೆಂಗಳೂರು: ನಕಲಿ ಗೋಲ್ಡ್​​ ಲೋನ್​​ ಸೃಷ್ಟಿಸಿ ಕೋಟಿ ಕೋಟಿ ವಂಚನೆ;  ಬ್ಯಾಂಕ್​ ಮ್ಯಾನೇಜರ್ ವಿರುದ್ಧ FIR ದಾಖಲು- vishwanews24

ಬೆಂಗಳೂರು:  ನಕಲಿ ಗೋಲ್ಡ್​​ ಲೋನ್​​ ಸೃಷ್ಟಿಸಿ ಕೋಟಿ ಕೋಟಿ ವಂಚನೆ;  ಬ್ಯಾಂಕ್​ಮ್ಯಾನೇಜರ್ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾರೀ ವಂಚನೆ ನಡೆದಿದ್ದು, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಬ್ಯಾಂಕ್​ನ ಹಿರಿಯ ಮ್ಯಾನೇಜರ್ ವಿರುದ್ಧವೇ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿದ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

3 ಕೋಟಿ ರೂ.ಗೂ ಹೆಚ್ಚು ವಂಚನೆ
ಮಲ್ಲೇಶ್ವರಂನ 15ನೇ ಕ್ರಾಸ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಕಲಿ ಗೋಲ್ಡ್ ಲೋನ್‌ಗಳನ್ನು ಸೃಷ್ಟಿಸಿ ಕೋಟಿ ಕೋಟಿ ರೂ. ಹಣ ಲೂಟಿ ಮಾಡಿರುವ ಆರೋಪ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕ ಎನ್. ರಘು ವಿರುದ್ಧ ಕೇಳಿಬಂದಿದೆ. 2025ರ ಅಕ್ಟೋಬರ್ 4ರಿಂದ ಡಿಸೆಂಬರ್ 9ರವರೆಗೆ ಒಟ್ಟು 41 ಗ್ರಾಹಕರ ಖಾತೆಗಳಲ್ಲಿ ಚಿನ್ನವೇ ಇರದೆ ನಕಲಿ ಗೋಲ್ಡ್ ಲೋನ್‌ಗಳನ್ನು ಓಪನ್ ಮಾಡಿ, ಸುಮಾರು 3.11 ಕೋಟಿ ರೂ. ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.

ವಯೋವೃದ್ಧರು, ಪಿಂಚಣಿದಾರರು, ಅರ್ಚಕರು ಹಾಗೂ ಹೋಲ್‌ಸೇಲ್ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡಿದ ಆರೋಪವಿದ್ದು, ಬ್ಯಾಂಕ್ ಕೆಲಸಕ್ಕೆ ಅಗತ್ಯವೆಂದು ಸುಳ್ಳು ಹೇಳಿ ಅವರಿಂದ ಒಟಿಪಿ ಮತ್ತು ಚೆಕ್ ಪಡೆದು ನಂಬಿಕೆ ದ್ರೋಹ ಮಾಡಲಾಗಿದೆ. ಗ್ರಾಹಕರಿಗೆ ತಿಳಿಯದೇ ಅವರ ಖಾತೆಗಳಲ್ಲಿ ಗೋಲ್ಡ್ ಲೋನ್ ತೆರೆದು ಹಣವನ್ನು ಡ್ರಾ ಮಾಡಿ ತನ್ನ ಖಾತೆಗೆ ವರ್ಗಾಯಿಸಿಕೊಂಡು ಎಸ್ಕೇಪ್ ಆಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಗ್ರಾಹಕರು ಎಚ್ಚರದಿಂದಿರುವಂತೆ ಸೂಚನೆ
ಈಗಾಗಲೇ ಕೆನರಾ ಬ್ಯಾಂಕ್ 41 ಖಾತೆಗಳನ್ನು ಫ್ರೀಜ್ ಮಾಡಿದ್ದು, ಯಾವುದೇ ಚಿನ್ನವಿಲ್ಲದೇ ಗ್ರಾಹಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಈ ಘಟನೆಯ ನಂತರ ತಮ್ಮ ಖಾತೆಗಳಲ್ಲಿ ಯಾವುದೇ ಅನುಮಾನಾಸ್ಪದ ಲೋನ್ ಇದೆಯೇ ಎಂಬುದನ್ನು ತಕ್ಷಣ ಪರಿಶೀಲಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗುತ್ತಿದೆ.

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

50 minutes ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

1 hour ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

1 hour ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

2 hours ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

2 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago