Featured

ಬೆಂಗಳೂರು : ನವೆಂಬರ್‌ 18ರಿಂದ ರಾತ್ರಿ 11.30ರವರೆಗೆ ಮೆಟ್ರೋ ಸಂಚಾರ , ತಡರಾತ್ರಿ ಕೆಲಸ ಮುಗಿಸಿ ಹೊರಡುವವರಿಗೆ ಅನುಕೂಲ – Vishwanews24

ಬೆಂಗಳೂರು : ನವೆಂಬರ್‌ 18ರಿಂದ ರಾತ್ರಿ 11.30ರವರೆಗೆ ಮೆಟ್ರೋ ಸಂಚಾರ , ತಡರಾತ್ರಿ ಕೆಲಸ ಮುಗಿಸಿ ಹೊರಡುವವರಿಗೆ ಅನುಕೂಲ – Vishwanews24

ಬೆಂಗಳೂರು : ಗುರುವಾರದಿಂದ (ನ.18)ರಿಂದ ಮಹಾನಗರದಲ್ಲಿ ಕ್ಷಿಪ್ರ ಸಾರಿಗೆ ಒದಗಿಸುವ ಮೆಟ್ರೋ ರೈಲು ಸೇವೆ ಮಧ್ಯರಾತ್ರಿವರೆಗೆ ಸಿಗಲಿದೆ.

ವಾರದ ಎಲ್ಲಾ ದಿನಗಳಲ್ಲಿ ಕೊನೆಯ ಮೆಟ್ರೋ ರೈಲು ಸೇವೆ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ಟರ್ಮಿನಲ್‌ ನಿಲ್ದಾಣದಿಂದ ರಾತ್ರಿ 11 ಗಂಟೆಗೆ ಹೊರಡಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕು ದಿಕ್ಕುಗಳ ಕೊನೆಯ ಮೆಟ್ರೋ ರಾತ್ರಿ 11.30ಕ್ಕೆ ಹೊರಡಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ರೈಲ್ವೇ ಸೇವೆ ಆರಂಭವಾಗಲಿದೆ. ಭಾನುವಾರ ಮಾತ್ರ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದೆ. ಮೆಟ್ರೊ ಸೇವೆ ವಿಸ್ತರಿಸಿರುವುದರಿಂದ ಉದ್ಯೋಗಿಗಳು, ವರ್ತಕರು, ಗ್ರಾಹಕರು ಪ್ರಯಾಣಕ್ಕಾಗಿ ವೈಯಕ್ತಿಕ ವಾಹನ, ಬಸ್‌, ಟ್ಯಾಕ್ಸಿ ಅಥವಾ ಆಟೋಗಳನ್ನು ಅವಲಂಭಿಸುವ ಸ್ಥಿತಿ ತಪ್ಪಲಿದೆ.

ಮುಂಜಾನೆ 5 ಗಂಟೆಯಿಂದ ರಾತ್ರಿ 12ರವರೆಗೆ ಮೆಟ್ರೋ ರೈಲು ಕಾರ್ಯಾಚರಣೆಗೊಳಿಸಬೇಕೆಂಬುದು ಪ್ರಯಾಣಿಕರ ಒತ್ತಾಯವಾಗಿತ್ತು. ಸದ್ಯ 11 ಗಂಟೆವರೆಗೆ ರೈಲ್ವೇ ಸೇವೆ ವಿಸ್ತರಿಸಿರುವುದರಿಂದ ಮೆಜೆಸ್ಟಿಕ್‌, ಚಿಕ್ಕಪೇಟೆ, ಪೀಣ್ಯ, ಎಂ.ಜಿ.ರಸ್ತೆ, ಜಯನಗರ, ರಾಜಾಜಿನಗರ, ಮಲ್ಲೇಶ್ವರ ಸೇರಿ ಇತರೆ ಪ್ರದೇಶಗಳಲ್ಲಿನ ಅಂಗಡಿ-ಮುಂಗಟ್ಟುಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ರಾತ್ರಿ ವೇಳೆ ರೈಲು ಸೇವೆ ಸಿಗುವಂತಾಗಿದೆ.

ಲಾಕ್‌ಡೌನ್‌ ನಂತರ ಮೆಟ್ರೊ ಸೇವೆ ಆರಂಭವಾದಾಗ ಬೆಳಗ್ಗೆ 7 ಗಂಟೆಯಿಂದ ಸಂಜೆ 8ರ ತನಕ ಸಂಚಾರವಿತ್ತು. ಈ ಸಮಯದಲ್ಲಿ ಪ್ರತಿದಿನ ಪ್ರಯಾಣಿಕರ ಸಂಖ್ಯೆ ಸರಾಸರಿ ಒಂದು ಲಕ್ಷ ಇತ್ತು. ನಂತರ ಸಮಯವನ್ನು ಬೆಳಗ್ಗೆ 5 ರಿಂದ ಸಂಜೆ 10ರವರೆಗೆ ವಿಸ್ತರಿಸಲಾಯಿತು. ಇದರಿಂದ ಪ್ರಯಾಣಿಕರ ಸಂಖ್ಯೆ ಕೂಡ ಅಧಿಕವಾಯಿತು. ಪ್ರಸ್ತುತ ಪ್ರತಿದಿನ ಸರಾಸರಿ 2.5 ಲಕ್ಷ ಜನರು ಸಂಚಾರ ಮಾಡುತ್ತಿದ್ದಾರೆ. ಅವಧಿಯನ್ನು ಮಧ್ಯರಾತ್ರಿವರೆಗೆ ವಿಸ್ತರಿಸಿದರೆ ಪ್ರಯಾಣಿಕರ ಸಂಖ್ಯೆ ಕೂಡ ಅಧಿಕವಾಗಲಿದ್ದು, ಆದಾಯ ಕೂಡ ಹೆಚ್ಚಲಿದೆ. ಕೋವಿಡ್‌ ಪೂರ್ವದಲ್ಲಿ ಪ್ರತಿದಿನ ಸರಾಸರಿ 4 ಲಕ್ಷಕ್ಕೂ ಅಧಿಕ ಜನರು ಮೆಟ್ರೊ ಸೇವೆ ಬಳಸುತ್ತಿದ್ದರು.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

4 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

2 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

2 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

2 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

2 hours ago