Featured

ಬೆಂಗಳೂರು : ನವೆಂಬರ್‌ 18ರಿಂದ ರಾತ್ರಿ 11.30ರವರೆಗೆ ಮೆಟ್ರೋ ಸಂಚಾರ , ತಡರಾತ್ರಿ ಕೆಲಸ ಮುಗಿಸಿ ಹೊರಡುವವರಿಗೆ ಅನುಕೂಲ – Vishwanews24

ಬೆಂಗಳೂರು : ನವೆಂಬರ್‌ 18ರಿಂದ ರಾತ್ರಿ 11.30ರವರೆಗೆ ಮೆಟ್ರೋ ಸಂಚಾರ , ತಡರಾತ್ರಿ ಕೆಲಸ ಮುಗಿಸಿ ಹೊರಡುವವರಿಗೆ ಅನುಕೂಲ – Vishwanews24

ಬೆಂಗಳೂರು : ಗುರುವಾರದಿಂದ (ನ.18)ರಿಂದ ಮಹಾನಗರದಲ್ಲಿ ಕ್ಷಿಪ್ರ ಸಾರಿಗೆ ಒದಗಿಸುವ ಮೆಟ್ರೋ ರೈಲು ಸೇವೆ ಮಧ್ಯರಾತ್ರಿವರೆಗೆ ಸಿಗಲಿದೆ.

ವಾರದ ಎಲ್ಲಾ ದಿನಗಳಲ್ಲಿ ಕೊನೆಯ ಮೆಟ್ರೋ ರೈಲು ಸೇವೆ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ಟರ್ಮಿನಲ್‌ ನಿಲ್ದಾಣದಿಂದ ರಾತ್ರಿ 11 ಗಂಟೆಗೆ ಹೊರಡಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕು ದಿಕ್ಕುಗಳ ಕೊನೆಯ ಮೆಟ್ರೋ ರಾತ್ರಿ 11.30ಕ್ಕೆ ಹೊರಡಲಿದೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ರೈಲ್ವೇ ಸೇವೆ ಆರಂಭವಾಗಲಿದೆ. ಭಾನುವಾರ ಮಾತ್ರ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದೆ. ಮೆಟ್ರೊ ಸೇವೆ ವಿಸ್ತರಿಸಿರುವುದರಿಂದ ಉದ್ಯೋಗಿಗಳು, ವರ್ತಕರು, ಗ್ರಾಹಕರು ಪ್ರಯಾಣಕ್ಕಾಗಿ ವೈಯಕ್ತಿಕ ವಾಹನ, ಬಸ್‌, ಟ್ಯಾಕ್ಸಿ ಅಥವಾ ಆಟೋಗಳನ್ನು ಅವಲಂಭಿಸುವ ಸ್ಥಿತಿ ತಪ್ಪಲಿದೆ.

ಮುಂಜಾನೆ 5 ಗಂಟೆಯಿಂದ ರಾತ್ರಿ 12ರವರೆಗೆ ಮೆಟ್ರೋ ರೈಲು ಕಾರ್ಯಾಚರಣೆಗೊಳಿಸಬೇಕೆಂಬುದು ಪ್ರಯಾಣಿಕರ ಒತ್ತಾಯವಾಗಿತ್ತು. ಸದ್ಯ 11 ಗಂಟೆವರೆಗೆ ರೈಲ್ವೇ ಸೇವೆ ವಿಸ್ತರಿಸಿರುವುದರಿಂದ ಮೆಜೆಸ್ಟಿಕ್‌, ಚಿಕ್ಕಪೇಟೆ, ಪೀಣ್ಯ, ಎಂ.ಜಿ.ರಸ್ತೆ, ಜಯನಗರ, ರಾಜಾಜಿನಗರ, ಮಲ್ಲೇಶ್ವರ ಸೇರಿ ಇತರೆ ಪ್ರದೇಶಗಳಲ್ಲಿನ ಅಂಗಡಿ-ಮುಂಗಟ್ಟುಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ರಾತ್ರಿ ವೇಳೆ ರೈಲು ಸೇವೆ ಸಿಗುವಂತಾಗಿದೆ.

ಲಾಕ್‌ಡೌನ್‌ ನಂತರ ಮೆಟ್ರೊ ಸೇವೆ ಆರಂಭವಾದಾಗ ಬೆಳಗ್ಗೆ 7 ಗಂಟೆಯಿಂದ ಸಂಜೆ 8ರ ತನಕ ಸಂಚಾರವಿತ್ತು. ಈ ಸಮಯದಲ್ಲಿ ಪ್ರತಿದಿನ ಪ್ರಯಾಣಿಕರ ಸಂಖ್ಯೆ ಸರಾಸರಿ ಒಂದು ಲಕ್ಷ ಇತ್ತು. ನಂತರ ಸಮಯವನ್ನು ಬೆಳಗ್ಗೆ 5 ರಿಂದ ಸಂಜೆ 10ರವರೆಗೆ ವಿಸ್ತರಿಸಲಾಯಿತು. ಇದರಿಂದ ಪ್ರಯಾಣಿಕರ ಸಂಖ್ಯೆ ಕೂಡ ಅಧಿಕವಾಯಿತು. ಪ್ರಸ್ತುತ ಪ್ರತಿದಿನ ಸರಾಸರಿ 2.5 ಲಕ್ಷ ಜನರು ಸಂಚಾರ ಮಾಡುತ್ತಿದ್ದಾರೆ. ಅವಧಿಯನ್ನು ಮಧ್ಯರಾತ್ರಿವರೆಗೆ ವಿಸ್ತರಿಸಿದರೆ ಪ್ರಯಾಣಿಕರ ಸಂಖ್ಯೆ ಕೂಡ ಅಧಿಕವಾಗಲಿದ್ದು, ಆದಾಯ ಕೂಡ ಹೆಚ್ಚಲಿದೆ. ಕೋವಿಡ್‌ ಪೂರ್ವದಲ್ಲಿ ಪ್ರತಿದಿನ ಸರಾಸರಿ 4 ಲಕ್ಷಕ್ಕೂ ಅಧಿಕ ಜನರು ಮೆಟ್ರೊ ಸೇವೆ ಬಳಸುತ್ತಿದ್ದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

21 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

22 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

22 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

23 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

23 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago