ಬೆಂಗಳೂರು : ಗುರುವಾರದಿಂದ (ನ.18)ರಿಂದ ಮಹಾನಗರದಲ್ಲಿ ಕ್ಷಿಪ್ರ ಸಾರಿಗೆ ಒದಗಿಸುವ ಮೆಟ್ರೋ ರೈಲು ಸೇವೆ ಮಧ್ಯರಾತ್ರಿವರೆಗೆ ಸಿಗಲಿದೆ.
ವಾರದ ಎಲ್ಲಾ ದಿನಗಳಲ್ಲಿ ಕೊನೆಯ ಮೆಟ್ರೋ ರೈಲು ಸೇವೆ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ಟರ್ಮಿನಲ್ ನಿಲ್ದಾಣದಿಂದ ರಾತ್ರಿ 11 ಗಂಟೆಗೆ ಹೊರಡಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕು ದಿಕ್ಕುಗಳ ಕೊನೆಯ ಮೆಟ್ರೋ ರಾತ್ರಿ 11.30ಕ್ಕೆ ಹೊರಡಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ಬೆಳಗ್ಗೆ 6 ಗಂಟೆಗೆ ರೈಲ್ವೇ ಸೇವೆ ಆರಂಭವಾಗಲಿದೆ. ಭಾನುವಾರ ಮಾತ್ರ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದೆ. ಮೆಟ್ರೊ ಸೇವೆ ವಿಸ್ತರಿಸಿರುವುದರಿಂದ ಉದ್ಯೋಗಿಗಳು, ವರ್ತಕರು, ಗ್ರಾಹಕರು ಪ್ರಯಾಣಕ್ಕಾಗಿ ವೈಯಕ್ತಿಕ ವಾಹನ, ಬಸ್, ಟ್ಯಾಕ್ಸಿ ಅಥವಾ ಆಟೋಗಳನ್ನು ಅವಲಂಭಿಸುವ ಸ್ಥಿತಿ ತಪ್ಪಲಿದೆ.
ಮುಂಜಾನೆ 5 ಗಂಟೆಯಿಂದ ರಾತ್ರಿ 12ರವರೆಗೆ ಮೆಟ್ರೋ ರೈಲು ಕಾರ್ಯಾಚರಣೆಗೊಳಿಸಬೇಕೆಂಬುದು ಪ್ರಯಾಣಿಕರ ಒತ್ತಾಯವಾಗಿತ್ತು. ಸದ್ಯ 11 ಗಂಟೆವರೆಗೆ ರೈಲ್ವೇ ಸೇವೆ ವಿಸ್ತರಿಸಿರುವುದರಿಂದ ಮೆಜೆಸ್ಟಿಕ್, ಚಿಕ್ಕಪೇಟೆ, ಪೀಣ್ಯ, ಎಂ.ಜಿ.ರಸ್ತೆ, ಜಯನಗರ, ರಾಜಾಜಿನಗರ, ಮಲ್ಲೇಶ್ವರ ಸೇರಿ ಇತರೆ ಪ್ರದೇಶಗಳಲ್ಲಿನ ಅಂಗಡಿ-ಮುಂಗಟ್ಟುಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ರಾತ್ರಿ ವೇಳೆ ರೈಲು ಸೇವೆ ಸಿಗುವಂತಾಗಿದೆ.
ಲಾಕ್ಡೌನ್ ನಂತರ ಮೆಟ್ರೊ ಸೇವೆ ಆರಂಭವಾದಾಗ ಬೆಳಗ್ಗೆ 7 ಗಂಟೆಯಿಂದ ಸಂಜೆ 8ರ ತನಕ ಸಂಚಾರವಿತ್ತು. ಈ ಸಮಯದಲ್ಲಿ ಪ್ರತಿದಿನ ಪ್ರಯಾಣಿಕರ ಸಂಖ್ಯೆ ಸರಾಸರಿ ಒಂದು ಲಕ್ಷ ಇತ್ತು. ನಂತರ ಸಮಯವನ್ನು ಬೆಳಗ್ಗೆ 5 ರಿಂದ ಸಂಜೆ 10ರವರೆಗೆ ವಿಸ್ತರಿಸಲಾಯಿತು. ಇದರಿಂದ ಪ್ರಯಾಣಿಕರ ಸಂಖ್ಯೆ ಕೂಡ ಅಧಿಕವಾಯಿತು. ಪ್ರಸ್ತುತ ಪ್ರತಿದಿನ ಸರಾಸರಿ 2.5 ಲಕ್ಷ ಜನರು ಸಂಚಾರ ಮಾಡುತ್ತಿದ್ದಾರೆ. ಅವಧಿಯನ್ನು ಮಧ್ಯರಾತ್ರಿವರೆಗೆ ವಿಸ್ತರಿಸಿದರೆ ಪ್ರಯಾಣಿಕರ ಸಂಖ್ಯೆ ಕೂಡ ಅಧಿಕವಾಗಲಿದ್ದು, ಆದಾಯ ಕೂಡ ಹೆಚ್ಚಲಿದೆ. ಕೋವಿಡ್ ಪೂರ್ವದಲ್ಲಿ ಪ್ರತಿದಿನ ಸರಾಸರಿ 4 ಲಕ್ಷಕ್ಕೂ ಅಧಿಕ ಜನರು ಮೆಟ್ರೊ ಸೇವೆ ಬಳಸುತ್ತಿದ್ದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…