Featured

ಬೆಂಗಳೂರು: ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್‌ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆ – vishwanews24

ಬೆಂಗಳೂರು: ನಾಪತ್ತೆಯಾಗಿದ್ದ ಪ್ರೇಮಿಗಳು ಕೆರೆಗೆ ಹಾರಿ ಆತ್ಮಹತ್ಯೆ

ಬೆಂಗಳೂರು: ಜುಲೈ 1ರಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ಶವ  ನೈಸ್‌ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆಯಾಗಿದೆ. ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ.

ಅಂಜನಾಪುರದ ತುಳಸಿಪುರ ಕೆರೆಯಲ್ಲಿ ಶವಗಳು ಪತ್ತೆಯಾಗಿವೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (24) ಸಾವನ್ನಪ್ಪಿರುವ ದುರ್ದೈವಿಗಳು. ಬಿಬಿಎ ವಿದ್ಯಾರ್ಥಿಯಾಗಿದ್ದ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರ ನಿವಾಸಿ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ಶ್ರೀಕಾಂತ್‌ ಕೋಣನಕುಂಟೆ ನಿವಾಸಿ. ನಾಪತ್ತೆ ಹಿನ್ನೆಲೆಯಲ್ಲಿ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಲ್ಲಿ ಶ್ರೀಕಾಂತ್‌ ವಿವಾಹಿತನಾಗಿದ್ದ. ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು. ಇಬ್ಬರೂ ದಾರದಿಂದ ಕೈ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಟುಂಬಸ್ಥರ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಇಬ್ಬರೂ ಸ್ನೇಹಿತರಾಗಿದ್ದು, ಒಟ್ಟಿಗೆ ಓಡಾಡುತ್ತಿದ್ದರು. ಇಬ್ಬರಲ್ಲಿ ಶ್ರೀಕಾಂತ್‌ಗೆ ಮದುವೆಯಾಗಿದೆ. ಮದುವೆ ಆದ ಕಾರಣ ಒಟ್ಟಿಗೆ ಇರಲು ಆಗಲ್ಲ ಅನ್ನೋ ದುಃಖ ಇತ್ತು. ಇಬ್ಬರೂ ಒಟ್ಟಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ತನಿಖೆ ಮುಂದುವರೆದಿದೆʼ ಎಂದು ದಕ್ಷಿಣ ವಿಭಾಗ ಡಿಸಿಪಿ ಲೋಕೆಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.

ಇಬ್ಬರು ಒಟ್ಟಿಗೆ ಬದುಕಲು ಆಗಲ್ಲ ಎಂದು ಸಾಯೊ‌ ನಿರ್ಧಾರ ಮಾಡಿದ್ದಾರೆ. ಯುವತಿ ಅಂಜನಾ ಸಾವಿಗೆ ಮುನ್ನ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾಳೆ. ನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋದಲ್ಲಿ ಹೇಳಿದ್ದಾಳೆ. ಅದನ್ನು ಆಟೋದಲ್ಲಿ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನ ಬಾಡಿ ಮೇಲೆತ್ತುವಾಗ ಅಂಜನಾ ಮೃತದೇಹ ಕೂಡ ಹೊರಗೆ ಬಂದಿದೆ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆʼ ಎಂದು ಜಗಲಾಸರ್‌ ತಿಳಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

7 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

7 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

7 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

8 hours ago