ಬೆಂಗಳೂರು: ಜುಲೈ 1ರಿಂದ ನಾಪತ್ತೆಯಾಗಿದ್ದ ಪ್ರೇಮಿಗಳ ಶವ ನೈಸ್ ರಸ್ತೆ ಬಳಿಯ ಕೆರೆಯಲ್ಲಿ ಪತ್ತೆಯಾಗಿದೆ. ಪ್ರೀತಿಗೆ ಪೋಷಕರ ವಿರೋಧದ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಂಜನಾಪುರದ ತುಳಸಿಪುರ ಕೆರೆಯಲ್ಲಿ ಶವಗಳು ಪತ್ತೆಯಾಗಿವೆ. ಕಾಲೇಜು ವಿದ್ಯಾರ್ಥಿನಿ ಅಂಜನಾ (20) ಮತ್ತು ಶ್ರೀಕಾಂತ್ (24) ಸಾವನ್ನಪ್ಪಿರುವ ದುರ್ದೈವಿಗಳು. ಬಿಬಿಎ ವಿದ್ಯಾರ್ಥಿಯಾಗಿದ್ದ ಅಂಜನಾ ತಲಘಟ್ಟಪುರ ಸಮೀಪದ ಅಂಜನಾಪುರ ನಿವಾಸಿ. ಬಿಕಾಂ ವ್ಯಾಸಂಗ ಮಾಡುತ್ತಿದ್ದ ಶ್ರೀಕಾಂತ್ ಕೋಣನಕುಂಟೆ ನಿವಾಸಿ. ನಾಪತ್ತೆ ಹಿನ್ನೆಲೆಯಲ್ಲಿ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಕಳೆದ ಕೆಲ ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಲ್ಲಿ ಶ್ರೀಕಾಂತ್ ವಿವಾಹಿತನಾಗಿದ್ದ. ಆದರೆ ಅಂಜನಾಳನ್ನು ಪ್ರೀತಿಸುತ್ತಿದ್ದ. ಹೀಗಾಗಿ ಇವರಿಬ್ಬರ ಪ್ರೀತಿಗೆ ವಿದ್ಯಾರ್ಥಿನಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ನಂತರ ಇವರಿಬ್ಬರೂ ಜುಲೈ 1ರಂದು ನಾಪತ್ತೆಯಾಗಿದ್ದರು. ಇಬ್ಬರೂ ದಾರದಿಂದ ಕೈ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಟುಂಬಸ್ಥರ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಇಬ್ಬರೂ ಸ್ನೇಹಿತರಾಗಿದ್ದು, ಒಟ್ಟಿಗೆ ಓಡಾಡುತ್ತಿದ್ದರು. ಇಬ್ಬರಲ್ಲಿ ಶ್ರೀಕಾಂತ್ಗೆ ಮದುವೆಯಾಗಿದೆ. ಮದುವೆ ಆದ ಕಾರಣ ಒಟ್ಟಿಗೆ ಇರಲು ಆಗಲ್ಲ ಅನ್ನೋ ದುಃಖ ಇತ್ತು. ಇಬ್ಬರೂ ಒಟ್ಟಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ತನಿಖೆ ಮುಂದುವರೆದಿದೆʼ ಎಂದು ದಕ್ಷಿಣ ವಿಭಾಗ ಡಿಸಿಪಿ ಲೋಕೆಶ್ ಜಗಲಾಸರ್ ಹೇಳಿಕೆ ನೀಡಿದ್ದಾರೆ.
ಇಬ್ಬರು ಒಟ್ಟಿಗೆ ಬದುಕಲು ಆಗಲ್ಲ ಎಂದು ಸಾಯೊ ನಿರ್ಧಾರ ಮಾಡಿದ್ದಾರೆ. ಯುವತಿ ಅಂಜನಾ ಸಾವಿಗೆ ಮುನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿದ್ದಾಳೆ. ನಮ್ಮ ಸಾವಿಗೆ ಯಾರೂ ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋದಲ್ಲಿ ಹೇಳಿದ್ದಾಳೆ. ಅದನ್ನು ಆಟೋದಲ್ಲಿ ಬಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನ ಬಾಡಿ ಮೇಲೆತ್ತುವಾಗ ಅಂಜನಾ ಮೃತದೇಹ ಕೂಡ ಹೊರಗೆ ಬಂದಿದೆ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆʼ ಎಂದು ಜಗಲಾಸರ್ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…